ಉಡುಪಿ: ಇನ್ಫೋಸಿಸ್ ಸಂಸ್ಥೆಯಿಂದ ಜಿಲ್ಲಾಡಳಿತಕ್ಕೆ ₹ 70 ಲಕ್ಷ ಮೌಲ್ಯದ 10 ಆಮ್ಲಜನಕ ಸಾಂಧ್ರಕ, ಹಾಗೂ 10 ವೆಂಟಿಲೇಟರ್ಗಳನ್ನು ಗುರುವಾರ ಹಸ್ತಾಂತರಿಸಲಾಯಿತು. ಕಂಪನಿಯ ಪ್ರತಿನಿಧಿಗಳು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರಿಗೆ ವೈದ್ಯಕೀಯ ಉಪಕರಣಗಳನ್ನು ಹಸ್ತಾಂತರಿಸಿದರು.
ನಂತರ ಮಾತನಾಡಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಇನ್ಫೋಸಿಸ್ನಿಂದ ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲೂ ಜಿಲ್ಲಾಡಳಿತದ ಮನವಿಗೆ ಸ್ಪಂದನೆ ದೊರೆತಿತ್ತು. ಅಗತ್ಯವಿದ್ದ ವೈದ್ಯಕೀಯ ಸಾಮಗ್ರಿಗಳನ್ನು ಒದಗಿಸಲಾಗಿತ್ತು. ಕೋವಿಡ್ 2ನೇ ಅಲೆಯ ಸಮಯದಲ್ಲೂ ಜಿಲ್ಲಾಡಳಿತದ ಮನವಿಗೆ ಸ್ಪಂದಿಸಿರುವ ಇನ್ಫೋಸಿಸ್ ಆಮ್ಲಜನಕ ಸಾಂಧ್ರಕ, ಹಾಗೂ 10 ವೆಂಟಿಲೇಟರ್ಗಳನ್ನು ನೀಡಿದೆ. ಜಿಲ್ಲಾಡಳಿತದಿಂದ ಸಂಸ್ಥೆಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಉಡುಪಿ ಜಿಲ್ಲಾ ಆಸ್ಪತ್ರೆಗೆ 5 ವೆಂಟಿಲೇಟರ್, ಕುಂದಾಪುರ ತಾಲ್ಲೂಕು ಆಸ್ಪತ್ರೆಗೆ 2 ವೆಂಟಿಲೇಟರ್ ಹಾಗೂ ಕಾರ್ಕಳ ತಾಲ್ಲೂಕು ಆಸ್ಪತ್ರೆಗೆ 3 ವೆಂಟಿಲೇಟರ್ಗಳನ್ನು ನೀಡಲಾಗುವುದು. ಮೂರು ಆಸ್ಪತ್ರೆಗಳಿಗೆ ಆಮ್ಲಜನಕ ಸಾಂಧ್ರಕಗಳನ್ನು ವಿತರಿಸಲಾಗುವುದು ಎಂದರು.
ಈ ಸಂದರ್ಭ ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಇನ್ಫೋಸಿಸ್ ಮಂಗಳೂರು ವಿಭಾಗದ ಮ್ಯಾನೇಜರ್ ವಾಸುದೇವ ಕಾಮತ್ ಮತ್ತು ಸಂದೀಪ್ ಡಿಸಿಲ್ವಾ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.