ADVERTISEMENT

‘ಡಂಗುರಾವ ಸಾರಿ ಹರಿಯ’ ದಾಸರಪದಕ್ಕೆ ನೃತ್ಯ

​ಪ್ರಜಾವಾಣಿ ವಾರ್ತೆ
Published 21 ಜುಲೈ 2021, 15:28 IST
Last Updated 21 ಜುಲೈ 2021, 15:28 IST
ಉಡುಪಿಯ ಕೃಷ್ಣ ಮಠದಲ್ಲಿ ಶಯನಿ ಏಕಾದಶಿಯ ಪ್ರಯುಕ್ತ ಪರ್ಯಾಯ ಮಠಾಧೀಶರಾದ ಈಶಪ್ರಿಯ ತೀರ್ಥ ಶ್ರೀಗಳು ತುಳಸಿ ಹರಿವಾಣವನ್ನು ತಲೆಯ ಮೇಲಿಟ್ಟು ‘ಡಂಗುರಾವ ಸಾರಿ ಹರಿಯ’ ದಾಸರಪದಕ್ಕೆ ನೃತ್ಯ ಮಾಡಿದರು.
ಉಡುಪಿಯ ಕೃಷ್ಣ ಮಠದಲ್ಲಿ ಶಯನಿ ಏಕಾದಶಿಯ ಪ್ರಯುಕ್ತ ಪರ್ಯಾಯ ಮಠಾಧೀಶರಾದ ಈಶಪ್ರಿಯ ತೀರ್ಥ ಶ್ರೀಗಳು ತುಳಸಿ ಹರಿವಾಣವನ್ನು ತಲೆಯ ಮೇಲಿಟ್ಟು ‘ಡಂಗುರಾವ ಸಾರಿ ಹರಿಯ’ ದಾಸರಪದಕ್ಕೆ ನೃತ್ಯ ಮಾಡಿದರು.   

ಉಡುಪಿ: ಕೃಷ್ಣ ಮಠದಲ್ಲಿ ಶಯನಿ ಏಕಾದಶಿಯ ಪ್ರಯುಕ್ತ ಪರ್ಯಾಯ ಮಠಾಧೀಶರಾದ ಈಶಪ್ರಿಯ ತೀರ್ಥ ಶ್ರೀಗಳು ತುಳಸಿ ಹರಿವಾಣವನ್ನು ತಲೆಯ ಮೇಲಿಟ್ಟು ‘ಡಂಗುರಾವ ಸಾರಿ ಹರಿಯ’ ದಾಸರಪದಕ್ಕೆ ನೃತ್ಯ ಮಾಡಿದರು.

ಕೃಷ್ಣ ದೇವರಿಗೆ ರಾತ್ರಿ ಪೂಜೆ ನಡೆದ ನಂತರ ಉಡುಕು ವಾದ್ಯ, ಸೂರ್ಯವಾದ್ಯ, ನಾದಸ್ವರ, ಸಂಕೀರ್ತನೆ, ಸಂಗೀತ, ಭಾಗವತ ಪುರಾಣಗಳು ಚಂದ್ರಶಾಲೆಯಲ್ಲಿ ನೆರವೇರುತ್ತವೆ. ನಂತರ ದೇವರ ಎದುರಿನ ಮಂಟಪದಲ್ಲಿ ಸ್ವಾಮೀಜಿಯವರು ದೇವರಿಗೆ ಮಂಗಳಾರತಿ ಮಾಡಿ ತುಳಸಿ ಹರಿವಾಣವನ್ನು ತಲೆಯಲಿಟ್ಟು ನೃತ್ಯ ನಡೆಸಿ ಪ್ರದಕ್ಷಿಣೆ ಮಾಡುತ್ತಾರೆ.

ಈ ಸೇವೆಯು ಆಷಾಡ ಮಾಸದ ಶುಕ್ಲ ಏಕಾದಶಿಯಿಂದ ಕಾರ್ತಿಕ ಮಾಸದ ಶುಕ್ಲ ಏಕಾದಶಿಯವರೆಗೆ ಚಾತುರ್ಮಾಸದ 8 ಏಕಾದಶಿಗಳವರೆಗೂ ನಡೆಯುತ್ತದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.