ADVERTISEMENT

ಉಡುಪಿ: ಜಿಲ್ಲಾ ಪಂಚಾಯಿತಿ ಅಧ್ಯಕ್ಷರೀಗ ಬಸ್‌ ಕಂಡಕ್ಟರ್‌

​ಪ್ರಜಾವಾಣಿ ವಾರ್ತೆ
Published 30 ಮೇ 2020, 15:29 IST
Last Updated 30 ಮೇ 2020, 15:29 IST
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಈಚೆಗೆ ಖಾಸಗಿ ಬಸ್‌ನಲ್ಲಿ ನಿರ್ವಾಹಕರಾಗಿ ಕೆಲಸ ಮಾಡಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಈಚೆಗೆ ಖಾಸಗಿ ಬಸ್‌ನಲ್ಲಿ ನಿರ್ವಾಹಕರಾಗಿ ಕೆಲಸ ಮಾಡಿದರು.   

ಉಡುಪಿ: ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಈಚೆಗೆ ಖಾಸಗಿ ಬಸ್‌ನಲ್ಲಿ ನಿರ್ವಾಹಕರಾಗಿ ಗಮನ ಸೆಳೆದರು.

ಲಾಕ್‌ಡೌನ್ ಹಿನ್ನೆಲೆಯಲ್ಲಿ ಜನರ ಅನುಕೂಲಕ್ಕಾಗಿ ಕಡಿಯಾಳಿ ಗಣೇಶೋತ್ಸವ ಸಮಿತಿ ಹಾಗೂ ಖಾಸಗಿ ಬಸ್‌ ಮಾಲೀಕರು ಒಂದು ವಾರಗಳ ಕಾಲ ನಗರದಲ್ಲಿ ಉಚಿತವಾಗಿ ಬಸ್‌ಗಳನ್ನು ಓಡಿಸುತ್ತಿದ್ದು, ಬಸ್‌ಗಳಲ್ಲಿ ಬಿಜೆಪಿ ಹಾಗೂ ಸಾಮಾಜಿಕ ಕಾರ್ಯಕರ್ತರು ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಕೂಡ ಬಸ್‌ನಲ್ಲಿ ಕಂಡಕ್ಟರ್ ಆಗಿ ಕೆಲಸ ನಿರ್ವಹಿಸಿದರು. ದಿನಕರ ಬಾಬು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗುವ ಮುನ್ನ ಚಾಲಕ ವೃತ್ತಿಯಲ್ಲಿದ್ದವರು.

ರಾಜಕೀಯ ಒತ್ತಡದ ಮಧ್ಯೆ ನಡುವೆ ಬಸ್‌ನಲ್ಲಿ ನಿರ್ವಾಹಕ ವೃತ್ತಿ ಮಾಡಿದ್ದು ಖುಷಿ ಕೊಟ್ಟಿತು. ಇಡೀ ದಿನ ಕಂಡಕ್ಟರ್ ಆಗಿದ್ದು ಭಿನ್ನವಾದ ಅನುಭವ ನೀಡಿತು ಎಂದು ದಿನಕರ ಬಾಬು ಪ್ರತಿಕ್ರಿಯೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.