ಶಿರ್ವ: ‘ಮಕ್ಕಳಲ್ಲಿ ಸನಾತನ ಸಂಸ್ಕೃತಿಯ ಸ್ವಾಭಿಮಾನ ಬೆಳೆಸಬೇಕು. ಆ ಮೂಲಕ ಹಿಂದೂ ಸಮಾಜದ ಭವನವನ್ನು ಗಟ್ಟಿಗೊಳಿಸಬೇಕು’ ಎಂದು ಪಡುಕುತ್ಯಾರು ಆನೆಗುಂದಿ ಸಂಸ್ಥಾನ ಸರಸ್ವತಿ ಪೀಠದ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಹೇಳಿದರು.
ಚಾತುರ್ಮಾಸ್ಯ ವ್ರತ ಸಮಾರೋಪದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು.
ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಯಶಪಾಲ್ ಸುವರ್ಣ ಶುಭ ಹಾರೈಸಿದರು. ಆಸ್ಥಾನ ವಿದ್ವಾಂಸ ಶಂಕರಾಚಾರ್ಯ ಕಡ್ಲಾಸ್ಕರ್ ಪಂಡಿತ್ ಹುಬ್ಬಳ್ಳಿ ಮಾತನಾಡಿ, ‘ಗುರುವಿನ ಮಂತ್ರಾಕ್ಷತೆ ಮಾತ್ರದಿಂದಲೇ ಜೀವನ ಪಾವನವಾಗುತ್ತದೆ’ ಎಂದರು.
ಆನೆಗುಂದಿ ಪ್ರತಿಷ್ಠಾನದ ಅಧ್ಯಕ್ಷ ವಿ.ಶ್ರೀಧರ ಆಚಾರ್ಯ ವಡೇರ ಹೋಬಳಿ ಅಧ್ಯಕ್ಷತೆ ವಹಿಸಿದ್ದರು. ವಿಶ್ವಕರ್ಮ ಸಹಕಾರ ಬ್ಯಾಂಕ್ ಅಧ್ಯಕ್ಷ ಹರೀಶ್ ಆಚಾರ್ಯ, ಉದ್ಯಮಿ ಡಾ.ಜಿ. ರಾಮಕೃಷ್ಣ ಆಚಾರ್, ಬೆಂಗಳೂರು ವಿಶ್ವಕರ್ಮ ಸೇವಾ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಡಾ.ಬಿ.ಎಂ.ಉಮೇಶ್ ಕುಮಾರ್, ರಥ ಶಿಲ್ಪಿ ರಾಜಗೋಪಾಲ ಆಚಾರ್ಯ ಕೋಟೇಶ್ವರ, ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಗೌರವ ಅಧ್ಯಕ್ಷ ಪಿ.ವಿ ಗಂಗಾಧರ ಆಚಾರ್ಯ, ದಿನೇಶ್ ಆಚಾರ್ಯ ಪಡುಬಿದ್ರಿ, ಅಸೆಟ್ ಅಧ್ಯಕ್ಷ ಬಿ.ಸೂರ್ಯಕುಮಾರ್ ಆಚಾರ್ಯ ಹಳೆಯಂಗಡಿ, ಆನೆಗುಂದಿ ಗುರುಸೇವಾ ಪರಿಷತ್ ಕೇಂದ್ರ ಸಮಿತಿಯ ಅಧ್ಯಕ್ಷ ಗಣೇಶ್ ಆಚಾರ್ಯ ಕೆಮ್ಮಣ್ಣು, ಸರಸ್ವತೀ ಗೋವು ಪರ್ಯಾವರಣ್ ಸಂರಕ್ಷಣಾ ಟ್ರಸ್ಟ್ ಅಧ್ಯಕ್ಷ ಬೆಳುವಾಯಿ ಸುಂದರ ಆಚಾರ್ಯ, ಸರಸ್ವತಿ ಮಾತೃ ಮಂಡಳಿ ಉಪಾಧ್ಯಕ್ಷೆ ರಮಾ ಅಚ್ಚುತ ಆಚಾರ್ಯ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಮಧು ಆಚಾರ್ಯ ಮೂಲ್ಕಿ ಮತ್ತಿತರರು ಭಾಗವಹಿಸಿದ್ದರು.
ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ.ಬಿ ಆಚಾರ್ ಕಂಬಾರು ಸ್ವಾಗತಿಸಿದರು. ಕೆ.ಎಂ. ಗಂಗಾಧರ ಆಚಾರ್ಯ ಮತ್ತು ಗೀತಾಚಂದ್ರ ಆಚಾರ್ಯ ಕಾರ್ಕಳ, ಮೌನೇಶ್ ಶರ್ಮಾ ಪಡುಕುತ್ಯಾರು ನಿರೂಪಿಸಿದರು. ಕೋಶಾಧಿಕಾರಿ ಅರವಿಂದ ವೈ ಆಚಾರ್ಯ ಬೆಳುವಾಯಿ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.