ADVERTISEMENT

ಇಬ್ರಾಹಿಂ ಸಾಹೇಬ್ ಅವರಿಗೆ ಕಾರ್ಕಡ ಗೆಳೆಯರ ಬಳಗ ಕಾರಂತ ಪುರಸ್ಕಾರ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2020, 10:35 IST
Last Updated 6 ಸೆಪ್ಟೆಂಬರ್ 2020, 10:35 IST
 ಇಬ್ರಾಹಿಂ ಸಾಹೇಬ್
 ಇಬ್ರಾಹಿಂ ಸಾಹೇಬ್   

ಬ್ರಹ್ಮಾವರ: ಡಾ.ಕೋಟ ಶಿವರಾಮ ಕಾರಂತರ ಜನ್ಮದಿನದ ಪ್ರಯುಕ್ತ ಸಾಲಿಗ್ರಾಮ ಗೆಳೆಯರ ಬಳಗ ನೀಡುವ ವಾರ್ಷಿಕ ಕಾರಂತ ಪುರಸ್ಕಾರಕ್ಕೆ ಕಾರಂತರ ಒಡನಾಡಿ, ಪ್ರಗತಿಪರ ಚಿಂತಕ ಇಬ್ರಾಹಿಂ ಸಾಹೇಬ್ ಹಂಗಾರಕಟ್ಟೆ ಭಾಜನರಾಗಿದ್ದಾರೆ.

ಈ ಪುರಸ್ಕಾರವು ₹ 5ಸಾವಿರ ನಗದು ಹಾಗೂ ಸನ್ಮಾನ ಪತ್ರವನ್ನು ಒಳಗೊಂಡಿದೆ. ಅಕ್ಟೋಬರ್ 11ರಂದು ಕಾರ್ಕಡ ಗಿರಿಜಾ ಕಲ್ಯಾಣ ಮಂಟಪದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಬಳಗದ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT