ADVERTISEMENT

ಕಾರ್ಕಳ : ಮನ್ ಕೀ ಬಾತ್‌ನಿಂದ ರಾಷ್ಟ್ರಚಿಂತನೆ: ಬಿ.ವೈ. ವಿಜಯೇಂದ್ರ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2025, 6:03 IST
Last Updated 29 ಡಿಸೆಂಬರ್ 2025, 6:03 IST
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮನ್ ಕೀ ಬಾತ್‌ ವೀಕ್ಷಿಸಿದರು
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮನ್ ಕೀ ಬಾತ್‌ ವೀಕ್ಷಿಸಿದರು   

ಕಾರ್ಕಳ: ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕೀ ಬಾತ್’ ಕಾರ್ಯಕ್ರಮವು ಕೇವಲ ಭಾಷಣವಲ್ಲ, ಅದು ದೇಶದ ಕಟ್ಟ ಕಡೆಯ ವ್ಯಕ್ತಿಯ ಸಾಧನೆಯನ್ನು ಗುರುತಿಸುವ ಮತ್ತು ಜನಸಾಮಾನ್ಯರಲ್ಲಿ ದೇಶ ಪ್ರೇಮವನ್ನು ಜಾಗೃತಗೊಳಿಸುವ ಶಕ್ತಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಕಾರ್ಕಳ ತಾಲ್ಲೂಕಿನ ಮುಂಡ್ಕೂರು ಗ್ರಾಮದ ಸಚ್ಚೇರಿಪೇಟೆ ಲಯನ್ಸ್ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಆಯೋಜಿಸಿದ್ದ ‘ಮನ್ ಕೀ ಬಾತ್’ ಕಾರ್ಯಕ್ರಮದ 129ನೇ ಆವೃತ್ತಿಯ ನೇರ ಪ್ರಸಾರವನ್ನು ವೀಕ್ಷಿಸಿದ ಬಳಿಕ ಅವರು ಮಾತನಾಡಿದರು.

ರಾಜಕೀಯ ರಹಿತವಾಗಿ ದೇಶದ ವಿವಿಧ ಮೂಲೆಗಳಲ್ಲಿರುವ ಅನಾಮಧೇಯ ಸಾಧಕರನ್ನು ಮೋದಿ ಅವರು ಇಡೀ ಜಗತ್ತಿಗೆ ಪರಿಚಯಿಸುತ್ತಿದ್ದಾರೆ. ಇದು ಯುವ ಪೀಳಿಗೆಗೆ ದೊಡ್ಡ ಸ್ಫೂರ್ತಿ. ವಿದ್ಯಾರ್ಥಿಗಳಲ್ಲಿ ಬಾಲ್ಯದಿಂದಲೇ ರಾಷ್ಟ್ರಚಿಂತನೆ ಬೆಳೆಯಲು ಇಂತಹ ಕಾರ್ಯಕ್ರಮಗಳಿಂದ ಸಾಧ್ಯವಾಗುತ್ತದೆ ಎಂದರು.

ADVERTISEMENT

ಶಾಸಕ ವಿ.ಸುನಿಲ್ ಕುಮಾರ್ ಮಾತನಾಡಿ, ದೇಶದ ಹಳ್ಳಿ ಹಳ್ಳಿಗಳಲ್ಲಿರುವ ಸಂಸ್ಕೃತಿ, ಕಲೆ ಮತ್ತು ದೇಶಿಯ ಉತ್ಪನ್ನಗಳಿಗೆ ಮನ್ ಕೀ ಬಾತ್ ಮೂಲಕ ಹೊಸ ಆಯಾಮ ಸಿಕ್ಕಿದೆ ಎಂದರು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ಕಾರ್ಕಳ ಮಂಡಲಾಧ್ಯಕ್ಷ ನವೀನ್ ನಾಯಕ್,  ಪ್ರಮುಖರಾದ ಕೆ. ಉದಯ ಕುಮಾರ್ ಶೆಟ್ಡಿ, ಮಹಾವೀರ ಹೆಗ್ಡೆ, ಶಿಲ್ಪಾ ಜಿ. ಸುವರ್ಣ, ರೇಷ್ಮಾ ಉದಯ ಶೆಟ್ಟಿ ಉಪಸ್ಥಿತರಿದ್ದರು.