
ಪ್ರಜಾವಾಣಿ ವಾರ್ತೆ
ಕಾರ್ಕಳ: ತಾಲ್ಲೂಕಿನ ವಿವಿಧೆಡೆ ಬುಧವಾರ ಮಳೆಯಾಗಿದ್ದು ಹಾನಿ ಸಂಭವಿಸಿದೆ.
ಸಮೀಪ ಮಳೆ–ಗಾಳಿ ಹಾಗೂ ಸಿಡಿಲಿಗೆ ತೆಳ್ಳಾರು ರಸ್ತೆಯ ರಾಘವೇಂದ್ರ ಮಠದ ಸಮೀಪ ಮರವೊಂದು ವಿದ್ಯುತ್ ತಂತಿ ಮೇಲೆ ಬಿದ್ದು, ವಿದ್ಯುತ್ ಕಂಬ ನೆಲಕ್ಕುರುಳಿದೆ. ತೆಳ್ಳಾರಿನತ್ತ ಪ್ರಯಾಣಿಕರನ್ನು ಒಯ್ಯುತ್ತಿದ್ದ ಆಟೋದ ಮೇಲೆ ಮರದ ಕೊಂಬೆ ಬಿದ್ದು ರಿಕ್ಷಾ ಚಾಲಕನ ತಲೆಗೆ ತೀವ್ರ ಗಾಯವಾಗಿದೆ. ರಿಕ್ಷಾದಲ್ಲಿದ್ದ ಮೂವರು ಮಹಿಳಾ ಪ್ರಯಾಣಿಕರಿಗೆ ಪೆಟ್ಟಾಗಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಕಾರ್ಕಳದಿಂದ ತೆಳ್ಳಾರು ಹಾಗೂ ಮುಂಡ್ಲೆ ಕಡೆ ತೆರಳುವ ಘನ ವಾಹನ, ಬಸ್ ಸಂಚಾರ ಸ್ಥಗಿತಗೊಂಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.