ADVERTISEMENT

ಸರ್ಕಾರವೇ ನಕ್ಸಲರಿಗೆ ಶರಣಾಗಿದೆ: ಕೋಟ ಶ್ರೀನಿವಾಸ ಪೂಜಾರಿ

​ಪ್ರಜಾವಾಣಿ ವಾರ್ತೆ
Published 11 ಜನವರಿ 2025, 10:01 IST
Last Updated 11 ಜನವರಿ 2025, 10:01 IST
<div class="paragraphs"><p>ಕೋಟ ಶ್ರೀನಿವಾಸ ಪೂಜಾರಿ</p></div>

ಕೋಟ ಶ್ರೀನಿವಾಸ ಪೂಜಾರಿ

   

ಉಡುಪಿ: ನಕ್ಸಲರು ಶಸ್ತ್ರಾಸ್ತಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಬಂದರೆ ಅವರನ್ನು ಸ್ವೀಕರಿಸುವುದು ತಪ್ಪಲ್ಲ. ಆದರೆ ಮೊನ್ನೆ ನಕ್ಸಲರು ಸರ್ಕಾರಕ್ಕೆ ಶರಣಾದಂತೆ ತೋರಿಲ್ಲ. ಬದಲಾಗಿ ಸರ್ಕಾರವೇ ನಕ್ಸಲರಿಗೆ ಶರಣಾದಂತೆ ಭಾಸವಾಯಿತು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ಈ ಹಿಂದೆ ಶರಣಾದವರಿಗೆ ಸೌಲಭ್ಯಗಳು ಲಭಿಸಿಲ್ಲ. ಅಲ್ಲದೆ ನಕ್ಸಲ್‌ ಪೀಡಿತ ಪ್ರದೇಶದ ಜನರಿಗೆ ಮೂಲ ಸೌಲಭ್ಯಗಳನ್ನು ಒದಗಿಸುವ ಕಾರ್ಯ ನಡೆದಿಲ್ಲ ಎಂದರು.

ADVERTISEMENT

ಸರ್ಕಾರವೇ ನಕ್ಸಲರಿಗೆ ಶರಣಾದಂತಹ ನೀತಿಯಿಂದಾಗಿ ಇನ್ನು ಮುಂದೆ ನಕ್ಸಲರು ಹೆಚ್ಚಾಗುವ ಆತಂಕವೂ ಕಾಡುತ್ತಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.