ADVERTISEMENT

ಬೈಂದೂರು ದೋಣಿ ದುರಂತ: ಒಬ್ಬ ಮೀನುಗಾರನ ಶವ ಪತ್ತೆ, ಮೂವರಿಗೆ ಶೋಧ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2020, 7:01 IST
Last Updated 17 ಆಗಸ್ಟ್ 2020, 7:01 IST
ಪತ್ತೆಯಾದ ನಾಗ ಖಾರ್ವಿ ಅವರ ಶವ
ಪತ್ತೆಯಾದ ನಾಗ ಖಾರ್ವಿ ಅವರ ಶವ   

ಬೈಂದೂರು (ಉಡುಪಿ): ಕಿರಿಮಂಜೇಶ್ವರದ ಕೊಡೇರಿ ಸಮುದ್ರ ತೀರದಲ್ಲಿ ಭಾನುವಾರ ಸಂಭವಿಸಿದ್ದ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ನಾಲ್ವರು ಮೀನುಗಾರರ ಪೈಕಿ ಒಬ್ಬರ ಶವ ಪತ್ತೆಯಾಗಿದೆ.

ಕಿರಿಮಂಜೇಶ್ವರದ ಹೊಸಹಿತ್ಲು ಬಳಿ ನಾಗ ಖಾರ್ವಿ ಅವರ ಶವ ದೊರೆತಿದ್ದು, ಲಕ್ಷ್ಮಣ ಖಾರ್ವಿ, ಮಂಜುನಾಥ ಖಾರ್ವಿ ಹಾಗೂ ಶೇಖರ ಖಾರ್ವಿ ಅವರ ಪತ್ತೆಗೆ ಶೋಧ ಮುಂದುವರಿದಿದೆ.

ಭಾನುವಾರ ಮೀನುಗಾರಿಕೆಗೆ ತೆರಳಿದ್ದ ಸಂದರ್ಭ ಶ್ರೀ ಸಾಗರ್ ಹೆಸರಿನ ದೋಣಿ ಅಲೆಗಳ ಉಬ್ಬರಕ್ಕೆ ಸಿಲುಕಿ ಪಲ್ಟಿಯಾಗಿತ್ತು. ದೋಣಿಯಲ್ಲಿದ್ದ 12 ಮೀನುಗಾರರಲ್ಲಿ 8 ಮಂದಿಯನ್ನು ರಕ್ಷಣೆ ಮಾಡಲಾಗಿತ್ತು.

ADVERTISEMENT

ಕರಾವಳಿ ಕಾವಲು ಪಡೆಯ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರ ತಂಡ ನಿರಂತರ ಶೋಧ ಕಾರ್ಯದಲ್ಲಿ ತೊಡಗಿದೆ. ಕರಾವಳಿಯಲ್ಲಿ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಕಡಲು ಪ್ರಕ್ಷುಬ್ಧಗೊಂಡು ಅಲೆಗಳ ಉಬ್ಬರ ಹೆಚ್ಚಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.