ADVERTISEMENT

ಉಡುಪಿ: ನಾಳೆ ಹೃದ್ರೋಗ ತಜ್ಞರೊಂದಿಗೆ ಚರ್ಚೆ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2021, 15:58 IST
Last Updated 27 ಸೆಪ್ಟೆಂಬರ್ 2021, 15:58 IST

ಉಡುಪಿ: ವಿಶ್ವ ಹೃದಯ ದಿನದ ಅಂಗವಾಗಿ ಸೆ.29ರಂದು ಸಂಜೆ 5ಕ್ಕೆ ಮಣಿಪಾಲದ ಕಸ್ತೂರಬಾ ಆಸ್ಪತ್ರೆಯ ಫೇಸ್‌ಬುಕ್ ಪೇಜ್‌ನಲ್ಲಿ ಹೃದ್ರೋಗ ತಜ್ಞರೊಂದಿಗೆ ನೇರ ಮಾತುಕತೆ ಮತ್ತು ಚರ್ಚೆ ಕಾರ್ಯಕ್ರಮ ನಡೆಯಲಿದೆ.

ಮುಕ್ತ ಮಾತುಕತೆಯಲ್ಲಿ ಹೃದ್ರೋಗ ವಿಭಾಗದ ಪ್ರಾಧ್ಯಾಪಕರಾದ ಡಾ.ಎ.ಜೆ.ಅಶ್ವಲ್‌, ಹೃದಯ ಶಸ್ತ್ರ ಚಿಕಿತ್ಸಾ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಗುರುಪ್ರಸಾದ್ ರೈ, ಮಕ್ಕಳ ಹೃದ್ರೋಗ ತಜ್ಞರಾದ ಡಾ. ಗುಂಜನ್ ಬಂಗ ಮತ್ತು ಪಥ್ಯಾಹಾರ ವಿಭಾಗದ ಮುಖ್ಯಸ್ಥರಾದ ಸುವರ್ಣ ಹೆಬ್ಬಾರ್ ಭಾಗವಹಿಸಲಿದ್ದಾರೆ.

ಲಿಂಕ್ https://www.facebook.com/ManipalKasturbaHospital ಬಳಸಿ ಸಾರ್ವಜನಿಕರು ಫೇಸ್ ಬುಕ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶ್ನೆಗಳನ್ನು ಕೇಳಬಹುದು ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.