ADVERTISEMENT

ಕೊಲ್ಲೂರು ದೇವಸ್ಥಾನ ಅವ್ಯವಹಾರ ತನಿಖೆ ಭಕ್ತರ ಸಮ್ಮುಖದಲ್ಲಿ ನಡೆಯಲಿ: ಗುರುಪ್ರಸಾದ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2021, 13:12 IST
Last Updated 19 ಮಾರ್ಚ್ 2021, 13:12 IST

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆದ ಅವ್ಯವಹಾರದ ತನಿಖೆಗೆ ಸರ್ಕಾರ ಆದೇಶಿಸಿರುವುದು ಸ್ವಾಗತಾರ್ಹ. ದೇವಸ್ಥಾನದ ನಿರ್ವಹಣೆ, ಸ್ಥಿರಾಸ್ತಿ, ಚರಾಸ್ತಿಗಳ ಪರೀಶಿಲನೆ ಭಕ್ತರ ಸಮ್ಮುಖದಲ್ಲಿ ಪಾರದರ್ಶಕವಾಗಿ ನಡೆಯಬೇಕು. ದೇವಸ್ಥಾನ ಧಾರ್ಮಿಕ ಸಂಸ್ಥೆಗಳ ಮಹಾಸಂಘಕ್ಕೂ ಭಾಗವಹಿಸಲು ಅವಕಾಶ ನೀಡಬೇಕು ಎಂದು ಮಹಾಸಂಘದ ರಾಜ್ಯ ವಕ್ತಾರ ಗುರುಪ್ರಸಾದ ಗೌಡ ಒತ್ತಾಯಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನದ ಅವ್ಯವಹಾರ ತನಿಖೆಯಲ್ಲಿ ಭಕ್ತರ ಸಹಭಾಗಿತ್ವ ಮುಖ್ಯವಾಗಿದ್ದು, ಅವಕಾಶ ನೀಡಬೇಕು. ಎಲ್ಲ ಆಯಾಮಗಳಿಂದ ತನಿಖೆ ನಡೆಯಬೇಕು ಎಂದು ಗುರುಪ್ರಸಾದ್ ಗೌಡ ಆಗ್ರಹಿಸಿದರು.

ಸರ್ಕಾರದ ಅಧೀನದಲ್ಲಿರುವ ಬಹುತೇಕ ಎಲ್ಲ ದೇವಸ್ಥಾನಗಳಲ್ಲಿ ಅವ್ಯವಹಾರ ನಡೆದಿದ್ದು, ದೇಗುಲಗಳು ಸರ್ಕಾರದ ಹಿಡಿತದಿಂದ ಮುಕ್ತವಾಗಿ ಖಾಸಗೀಕರಣವಾಗಬೇಕು. ಇದರಿಂದ ಆಡಳಿತದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಸಾಧ್ಯವಿದ್ದು, ಅಕ್ರಮಗಳನ್ನು ತಡೆಯಬಹುದು ಎಂದು ಅಭಿಪ್ರಾಯಪಟ್ಟರು.

ADVERTISEMENT

ಸುದ್ದಿಗೋಷ್ಠಿಯಲ್ಲಿ ಮಹಾಸಂಘದ ಸದಸ್ಯ ಮಧುಸೂಧರ್ ಅಯ್ಯರ್, ಎಂ.ಪಿ.ದಿನೇಶ್, ಶ್ರೀನಿವಾಸ್‌, ಚಂದ್ರ ಮೊಗೇರ, ಹಿಂದೂ ಜನಜಾಗೃತಿ ಸಮಿತಿಯ ಸಮನ್ವಯಕರಾದ ವಿಜಯ ಕುಮಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.