ADVERTISEMENT

ಕೊಲ್ಲೂರು ಪ್ರವಾಸ ಮುಂದೂಡಿ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2020, 10:44 IST
Last Updated 14 ಮಾರ್ಚ್ 2020, 10:44 IST

ಉಡುಪಿ: ಕೋವಿಡ್‌ ಹರಡುತ್ತಿರುವುದರಿಂದ ಭಕ್ತರು ಒಂದು ವಾರ ಕೊಲ್ಲೂರು ದೇವಸ್ಥಾನ ಪ್ರವಾಸವನ್ನು ಮುಂದೂಡಬೇಕು ಎಂದು ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ತಿಳಿಸಿದ್ದಾರೆ.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ರಾಜ್ಯ, ಹೊರ ರಾಜ್ಯ ಹಾಗೂ ವಿದೇಶಗಳಿಂದ ಸಾವಿರಾರು ಭಕ್ತರು ಭೇಟಿ ನೀಡುತ್ತಾರೆ. ವಿದೇಶಗಳು ಸೇರಿದಂತೆ ದೇಶದೆಲ್ಲೆಡೆ ಕೋವಿಡ್ ಸೋಂಕು ವ್ಯಾಪಿಸುತ್ತಿರುವುದರಿಂದ ಭಕ್ತರು ತಾತ್ಕಾಲಿಕವಾಗಿ ಪ್ರವಾಸ ಮುಂದೂಡಿ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT