ಶಿರ್ವ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಉಡುಪಿ ಜಿಲ್ಲೆಯ ಉಸ್ತುವಾರಿ ತಪ್ಪಿದ ಕುರಿತು ಚರ್ಚಿಸಲು ಬಿಲ್ಲವ ಸಂಘಟನೆಗಳ ಪ್ರತಿನಿಧಿಗಳ ಮತ್ತು ಬಿಲ್ಲವ ಮುಖಂಡರ ತುರ್ತು ಸಭೆಯನ್ನು ಇದೇ 17ರ ಬೆಳಿಗ್ಗೆ 9.30ಕ್ಕೆ ಕಟಪಾಡಿ ವಿಶ್ವನಾಥ ಕ್ಷೇತ್ರದಲ್ಲಿ ಕರೆಯಲಾಗಿದೆ.
ಇದರೊಂದಿಗೆ, ಸರ್ಕಾರದ ವತಿಯಿಂದ ಇತ್ತೀಚೆಗೆ ಕಟಪಾಡಿಯಲ್ಲಿ ನಡೆದ ನಾರಾಯಣಗುರು ಜಯಂತಿಯಲ್ಲಿ ವಿವಿಧ ಜನಪ್ರತಿನಿಧಿಗಳು ಭಾಗವಹಿಸದೇ ಇರುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸುವ ಕುರಿತು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.