ADVERTISEMENT

ಫಲಾಪೇಕ್ಷೆ ಇಲ್ಲದ ಸೇವೆಯಿಂದ ಆತ್ಮತೃಪ್ತಿ: ಪ್ರೇಮಾನಂದ ಶೆಟ್ಟಿ ಕಟ್ಕೇರಿ

ಕೋಟ ಸಿಟಿ ರೋಟರಿ ಕ್ಲಬ್‍ ಪದಪ್ರದಾನ ಸಮಾರಂಭ

​ಪ್ರಜಾವಾಣಿ ವಾರ್ತೆ
Published 13 ಜುಲೈ 2021, 4:03 IST
Last Updated 13 ಜುಲೈ 2021, 4:03 IST
ಕೋಟ ಸಿಟಿ ರೋಟರಿ ಕ್ಲಬ್‌ನ 2021-–22ನೇ ಸಾಲಿನ ಪದಪ್ರದಾನ ಸಮಾರಂಭ ಭಾನುವಾರ ನಡೆಯಿತು.
ಕೋಟ ಸಿಟಿ ರೋಟರಿ ಕ್ಲಬ್‌ನ 2021-–22ನೇ ಸಾಲಿನ ಪದಪ್ರದಾನ ಸಮಾರಂಭ ಭಾನುವಾರ ನಡೆಯಿತು.   

ಕೋಟ(ಬ್ರಹ್ಮಾವರ): ‘ಯಾವುದೇ ಫಲಾಪೇಕ್ಷೆ ಇಲ್ಲದೆ ಮಾಡುವ ಸೇವೆಯು ಆತ್ಮತೃಪ್ತಿಯನ್ನು ತರುತ್ತದೆ. ನಾವು ಮಾಡಿದ ಸೇವೆಯನ್ನು ಜನರು ನೆನಪಿಸಿದಾಗ ನಮ್ಮ ಜೀವನ ಸಾರ್ಥಕವಾಗುತ್ತದೆ’ ಎಂದು ಪ್ರೇಮಾನಂದ ಶೆಟ್ಟಿ ಕಟ್ಕೇರಿ ಹೇಳಿದರು.

ಕೋಟ ಸಿಟಿ ರೋಟರಿ ಕ್ಲಬ್‍ನ 2021-22ನೇ ಸಾಲಿನ ಪದಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಉದಯ ಶೆಟ್ಟಿ ಹಾಗೂ ಕಾರ್ಯದರ್ಶಿ ಶಿವಾನಂದ ನಾಯರಿ ಅವರಿಗೆ ರೋಟರಿ ಅಂತರರಾಷ್ಟ್ರೀಯ ಜಿಲ್ಲೆ 3182ರ ವಲಯ 2ರ ಸಹಾಯಕ ಗವರ್ನರ್ ಧನಂಜಯ ಪ್ರಭು ಪದಪ್ರದಾನ ಮಾಡಿದರು.

ಉದ್ಯಮಿ ಕರುಣಾಕರ ಕಾಂಚನ್ ಹೊಸ ಸದಸ್ಯರಾಗಿ ಸೇರ್ಪಡೆಗೊಂಡರು. ವಲಯ ಸೇನಾನಿ ಗಂಗಾಧರ ಉಡುಪ ಕ್ಲಬ್‍ನ ಮುಖವಾಣಿ ದಿಕ್ಸೂಚಿಯನ್ನು ಬಿಡುಗಡೆಗೊಳಿಸಿದರು. ಸಾಲಿಗ್ರಾಮ ಕಾರ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಮಿನ್ನು ಎ.ಸಿ ಹಾಗೂ ಕೋಟದ ಮೆಸ್ಕಾಂ ಶಾಖೆಯಲ್ಲಿ ಜ್ಯೂನಿಯರ್ ಪವರ್ ಮ್ಯಾನ್ ರಮೇಶ ಮೇಳೆದ ಅವರನ್ನು ಗೌರವಿಸಲಾಯಿತು. ನಿರ್ಗಮಿತ ಅಧ್ಯಕ್ಷ ವಿಷ್ಣುಮೂರ್ತಿ ಉರಾಳ ಸ್ವಾಗತಿಸಿದರು. ಜತೆ ಕಾರ್ಯದರ್ಶಿ ಸತೀಶ ಪೂಜಾರಿ ವಂದಿಸಿದರು. ಶಾನಾಡಿ ಉದಯ ಕುಮಾರ್ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.