ADVERTISEMENT

ಉಡುಪಿ | ಕೋವಿಡ್-19ಗೆ ಮತ್ತೊಂದು ಬಲಿ

ಮುಂಬೈನಿಂದ ಬಂದಿದ್ದ ಸೋಂಕಿತ ಸಾವು

​ಪ್ರಜಾವಾಣಿ ವಾರ್ತೆ
Published 19 ಜೂನ್ 2020, 13:54 IST
Last Updated 19 ಜೂನ್ 2020, 13:54 IST
   

ಉಡುಪಿ: ಕುಂದಾಪುರ ತಾಲ್ಲೂಕಿನ ತೆಕ್ಕಟ್ಟೆಯಲ್ಲಿ ಗುರುವಾರ 54 ವರ್ಷದ ಕೋವಿಡ್ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ.

ಗುರುವಾರ ಮಧ್ಯಾಹ್ನ ಮುಂಬೈನಿಂದ ಮೂವರು ಕುಟುಂಬದ ಸದಸ್ಯರೊಂದಿಗೆ ಜಿಲ್ಲೆಗೆ ಬಂದಿದ್ದ ವ್ಯಕ್ತಿ ಹೋಂ ಕ್ವಾರಂಟೈನ್‌ನಲ್ಲಿದ್ದರು. ಸಂಜೆ 5 ಗಂಟೆಗೆ ತೀವ್ರ ಅನಾರೋಗ್ಯದಿಂದ ದಿಢೀರ್ ಸಾವನ್ನಪ್ಪಿದ್ದಾರೆ. ಮೃತರ ಗಂಟಲ ದ್ರವದ ಪರೀಕ್ಷಾ ವರದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ಪಷ್ಟಪಡಿಸಿದರು.

ಮರಣೋತ್ತರ ಪರೀಕ್ಷಾ ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಮೃತ ವ್ಯಕ್ತಿಯ ಕುಟುಂಬದ ಸದಸ್ಯರ ಗಂಟಲ ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಅವರು ವಾಸವಿರುವ ಮನೆಯನ್ನು ಸೀಲ್‌ಡೌನ್ ಮಾಡಲಾಗಿದ್ದು, ಕಂಟೈನ್‌ಮೆಂಟ್‌ ಪ್ರದೇಶವನ್ನಾಗಿ ಮಾಡಲಾಗಿದೆ. ಜಿಲ್ಲೆಯಲ್ಲಿ ಇದುವರೆಗೂ ಇಬ್ಬರು ಕೋವಿಡ್‌ ಸೋಂಕಿತರು ಮೃತಪಟ್ಟಿದ್ದಾರೆ ಎಂದು ವಿವರ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.