ADVERTISEMENT

ಉಡುಪಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2021, 11:44 IST
Last Updated 30 ಆಗಸ್ಟ್ 2021, 11:44 IST
   

ಉಡುಪಿ: ಕೃಷ್ಣಮಠದಲ್ಲಿ ಸೋಮವಾರ ಸರಳವಾಗಿ ಶ್ರದ್ಧಾ ಭಕ್ತಿಯಿಂದ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು. ಭಕ್ತರು ಬಾಲಕೃಷ್ಣನ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದ ಗೋಪಾಲನ ದರ್ಶನ ಮಾಡಿದರು.

ಮಧ್ಯಾಹ್ನ ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ಮಹಾಪೂಜೆ ನೆರವೇರಿಸಿದರು. ಮಧ್ಯರಾತ್ರಿ 12.17ರ ಶುಭ ಮುಹೂರ್ತದಲ್ಲಿ ಕೃಷ್ಣನಿಗೆ ಅರ್ಘ್ಯ ಪ್ರದಾನ ನಡೆಯಲಿದೆ.

ಆ.31ರಂದು ಮಧ್ಯಾಹ್ನ 3.30ಕ್ಕೆ ರಥಬೀದಿಯಲ್ಲಿ ವಿಟ್ಲಪಿಂಡಿ ಉತ್ಸವ ನಡೆಯಲಿದ್ದು, ಮೊಸರು ಕುಡಿಕೆ ಒಡೆಯುವುದು ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳು ನಡೆಯಲಿವೆ. ಕೋವಿಡ್ ಹಿನ್ನೆಲೆಯಲ್ಲಿ ಈ ವರ್ಷ ಕೃಷ್ಣನ ಲೀಲೋತ್ಸವಗಳಲ್ಲಿ ಭಾಗವಹಿಸಲು ಸಾರ್ವಜನಿಕರಿಗೆಅವಕಾಶನೀಡಲಾಗಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.