ADVERTISEMENT

ಡಂಗುರಾವ ಸಾರಿ ಹರಿಯ...

ದಾಸರ ಪದಕ್ಕೆ ಹೆಜ್ಜೆಹಾಕಿದ ಶ್ರೀಗಳು

​ಪ್ರಜಾವಾಣಿ ವಾರ್ತೆ
Published 2 ಜುಲೈ 2020, 14:47 IST
Last Updated 2 ಜುಲೈ 2020, 14:47 IST
ಉಡುಪಿಯ ಕೃಷ್ಣ ಮಠದಲ್ಲಿ ಶಯನೀ ಏಕಾದಶಿಯ ಪ್ರಯುಕ್ತ ಪರ್ಯಾಯ ಮಠಾಧೀಶರಾದ ಈಶಪ್ರಿಯ ತೀರ್ಥ ಶ್ರೀಪಾದರು ತುಳಸಿ ಹರಿವಾಣವನ್ನು ತಲೆಯ ಮೇಲಿಟ್ಟು ‘ಡಂಗುರಾವ ಸಾರಿ ಹರಿಯ’ ದಾಸರಪದಕ್ಕೆ ನೃತ್ಯ ಮಾಡಿದರು.
ಉಡುಪಿಯ ಕೃಷ್ಣ ಮಠದಲ್ಲಿ ಶಯನೀ ಏಕಾದಶಿಯ ಪ್ರಯುಕ್ತ ಪರ್ಯಾಯ ಮಠಾಧೀಶರಾದ ಈಶಪ್ರಿಯ ತೀರ್ಥ ಶ್ರೀಪಾದರು ತುಳಸಿ ಹರಿವಾಣವನ್ನು ತಲೆಯ ಮೇಲಿಟ್ಟು ‘ಡಂಗುರಾವ ಸಾರಿ ಹರಿಯ’ ದಾಸರಪದಕ್ಕೆ ನೃತ್ಯ ಮಾಡಿದರು.   

ಉಡುಪಿ: ಕೃಷ್ಣ ಮಠದಲ್ಲಿ ಶಯನೀ ಏಕಾದಶಿಯ ಪ್ರಯುಕ್ತ ಪರ್ಯಾಯ ಮಠಾಧೀಶರಾದ ಈಶಪ್ರಿಯ ತೀರ್ಥ ಶ್ರೀಪಾದರು ತುಳಸಿ ಹರಿವಾಣವನ್ನು ತಲೆಯ ಮೇಲಿಟ್ಟು ‘ಡಂಗುರಾವ ಸಾರಿ ಹರಿಯ’ ದಾಸರಪದಕ್ಕೆ ನೃತ್ಯ ಮಾಡಿದರು.

ಕೃಷ್ಣ ದೇವರಿಗೆ ರಾತ್ರಿ ಪೂಜೆಯ ನಂತರ ಉಡುಕು ವಾದ್ಯ, ಸೂರ್ಯವಾದ್ಯ, ನಾದಸ್ವರ, ಸಂಕೀರ್ತನೆ, ಸಂಗೀತ, ಭಾಗವತ ಪುರಾಣಗಳು ಚಂದ್ರಶಾಲೆಯಲ್ಲಿ ನಡೆಯಿತು. ಬಳಿಕ ದೇವರ ಎದುರಿಗಿರು ಮಂಟಪದಲ್ಲಿ ಸ್ವಾಮೀಜಿ ದೇವರಿಗೆ ಮಂಗಳಾರತಿ ಮಾಡಿ ತುಳಸಿ ಹರಿವಾಣವನ್ನು ತಲೆಯಲಿಟ್ಟು ನೃತ್ಯ ನಡೆಸಿ ಪ್ರದಕ್ಷಿಣೆ ಮಾಡಿದರು.

ಹರಿವಾಣ ಸೇವೆಆಷಾಡ ಮಾಸದ ಶುಕ್ಲ ಏಕಾದಶಿಯಿಂದ ಕಾರ್ತೀಕ ಮಾಸದ ಶುಕ್ಲ ಏಕಾದಶಿಯವರೆಗೆ ಚಾತುರ್ಮಾಸದ 8 ಏಕಾದಶಿಗಳವರೆಗೂ ನಡೆಯುತ್ತದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.