ADVERTISEMENT

ಕುಂದಾಪುರ: ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2022, 5:39 IST
Last Updated 7 ಫೆಬ್ರುವರಿ 2022, 5:39 IST
ಕುಂದಾಪುರದ ಸರ್ಕಾರಿ ಜೂನಿಯರ್ ಪದವಿಪೂರ್ವ ಕಾಲೇಜು ಆವರಣದಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಧರಿಸಿರುವ ವಿದ್ಯಾರ್ಥಿಗಳು- ಸಂಗ್ರಹ ಚಿತ್ರ
ಕುಂದಾಪುರದ ಸರ್ಕಾರಿ ಜೂನಿಯರ್ ಪದವಿಪೂರ್ವ ಕಾಲೇಜು ಆವರಣದಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಧರಿಸಿರುವ ವಿದ್ಯಾರ್ಥಿಗಳು- ಸಂಗ್ರಹ ಚಿತ್ರ   

ಕುಂದಾಪುರ: ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜಿಗೆ ಸೋಮವಾರ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಗಿದೆ.

ಬಸ್ರೂರು ಶಾರದಾ ಕಾಲೇಜಿನಲ್ಲೂ ಹಿಜಾಬ್ ಧರಿಸಿಬಂದ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ.

ಕುಂದಾಪುರದ ಆರ್‌ಎನ್‌ ಶೆಟ್ಟಿ ಕಾಲೇಜಿಗೆ ಸೋಮವಾರ ರಜೆ ಘೋಷಿಸಲಾಗಿದೆ.

ADVERTISEMENT

ಕುಂದಾಪುರದ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲುಧರಿಸಿ ಹಳೆ ಬಸ್ ನಿಲ್ದಾಣದಿಂದ ಕಾಲೇಜಿನವರೆಗೂ ಮೆರವಣಿಗೆ ನಡೆಸಿದರು. ಬಳಿಕ ಪ್ರಾಂಶುಪಾಲರ ಸೂಚನೆಯಂತೆ ವಿದ್ಯಾರ್ಥಿಗಳು ಕೇಸರಿಶಾಲು ತೆಗೆದಿಟ್ಟು ಕಾಲೇಜು ಪ್ರವೇಶಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.