ADVERTISEMENT

ಸರ್ಕಾರಿ ಗೌರವಗಳೊಂದಿಗೆ ಬನ್ನಂಜೆ ಗೋವಿಂದಾಚಾರ್ಯರ ಅಂತ್ಯಕ್ರಿಯೆ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2020, 15:41 IST
Last Updated 13 ಡಿಸೆಂಬರ್ 2020, 15:41 IST
ಹಿರಿಯ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯರ ಅಂತ್ಯಕ್ರಿಯೆ ಭಾನುವಾರ ರಾತ್ರಿ ಅಂಬಲಪಾಡಿಯ ಮನೆಯ ಆವರಣದಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ಹಿರಿಯ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯರ ಅಂತ್ಯಕ್ರಿಯೆ ಭಾನುವಾರ ರಾತ್ರಿ ಅಂಬಲಪಾಡಿಯ ಮನೆಯ ಆವರಣದಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.   

ಉಡುಪಿ: ಹಿರಿಯ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯರ ಅಂತ್ಯಕ್ರಿಯೆ ಭಾನುವಾರ ರಾತ್ರಿ ಅಂಬಲಪಾಡಿಯ ಮನೆಯ ಆವರಣದಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಜಿಲ್ಲಾಧಿಕಾರಿ ಜಿ.ಜಗದೀಶ್‌ ಜಿಲ್ಲಾಡಳಿತದ ಪರವಾಗಿ ಗೌರವ ಸಲ್ಲಿಸಿದರು. ಪೊಲೀಸರು ಮೂರು ಸುತ್ತು ಕುಶಾಲತೋಪು ಸಿಡಿಸಿ ಗೌರವ ಸೂಚಿಸಿದರು. ಬಳಿಕ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಹಿರಿಯ ಪುತ್ರ ವಿನಯಭೂಷಣ ಆಚಾರ್ಯ ಅಂತ್ಯಕ್ರಿಯೆ ನೆರವೇರಿಸಿದರು.

ಈ ಸಂದರ್ಭ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು, ಶಾಸಕ ರಘುಪತಿ ಭಟ್‌, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉದ್ಯಮಿ ಜಿ.ಶಂಕರ್‌, ಎಸ್‌ಪಿ ವಿಷ್ಣುವರ್ಧನ್‌, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.