ADVERTISEMENT

ಸಮಗ್ರ ಪ್ರಶಸ್ತಿ ಪಡೆದ ಮಂಗಳೂರು ವಕೀಲರ ತಂಡ

ಉಡುಪಿಯಲ್ಲಿ ರಾಜ್ಯ ಮಟ್ಟದ ‘ವಕೀಲರ ಸಾಂಸ್ಕೃತಿಕ ಹಬ್ಬ–ಉತ್ಸವ್‌’ ಸಮಾರಂಭ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2021, 16:30 IST
Last Updated 14 ಮಾರ್ಚ್ 2021, 16:30 IST
ಉಡುಪಿ ವಕೀಲರ ಸಂಘದಿಂದ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ 2 ದಿನಗಳ ರಾಜ್ಯ ಮಟ್ಟದ ‘ವಕೀಲರ ಸಾಂಸ್ಕೃತಿಕ ಹಬ್ಬ–ಉತ್ಸವ್‌’ ಸ್ಪರ್ಧೆಯಲ್ಲಿ ಮಂಗಳೂರಿನ ವಕೀಲರ ಸಂಘ ಸಮಗ್ರ ಪ್ರಶಸ್ತಿಯನ್ನು ಗೆದ್ದುಕೊಂಡಿತು.
ಉಡುಪಿ ವಕೀಲರ ಸಂಘದಿಂದ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ 2 ದಿನಗಳ ರಾಜ್ಯ ಮಟ್ಟದ ‘ವಕೀಲರ ಸಾಂಸ್ಕೃತಿಕ ಹಬ್ಬ–ಉತ್ಸವ್‌’ ಸ್ಪರ್ಧೆಯಲ್ಲಿ ಮಂಗಳೂರಿನ ವಕೀಲರ ಸಂಘ ಸಮಗ್ರ ಪ್ರಶಸ್ತಿಯನ್ನು ಗೆದ್ದುಕೊಂಡಿತು.   

ಉಡುಪಿ: ಉಡುಪಿ ವಕೀಲರ ಸಂಘದಿಂದ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಜ್ಯ ಮಟ್ಟದ ‘ವಕೀಲರ ಸಾಂಸ್ಕೃತಿಕ ಹಬ್ಬ–ಉತ್ಸವ್‌’ ಸ್ಪರ್ಧೆಯಲ್ಲಿ ಮಂಗಳೂರಿನ ವಕೀಲರ ಸಂಘ ಸಮಗ್ರ ಪ್ರಶಸ್ತಿಯನ್ನು ಗೆದ್ದುಕೊಂಡಿತು.

ಸಾಂಸ್ಕೃತಿಕ ಕಾರ್ಯಕ್ರಮಗಳ ವಿಭಾಗಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ಮಂಗಳೂರು ವಕೀಲರ ಸಂಘ ಮೊದಲ ಬಹುಮಾನವಾಗಿ ₹ 30,000 ನಗದು, ಆಕರ್ಷಕ ಟ್ರೋಫಿ ಪಡೆದುಕೊಂಡಿತು. ಬೆಂಗಳೂರು ವಕೀಲರ ಸಂಘ ₹ 20,000 ನಗದು ಪುರಸ್ಕಾರ ಸಹಿತ ಟ್ರೋಫಿಯೊಂದಿಗೆ ದ್ವಿತೀಯ ಸ್ಥಾನ ಪಡೆಯಿತು.

ಕೊಪ್ಪದ ವಕೀಲರ ಸಂಘ ₹ 10,000 ನಗದು ಬಹುಮಾನ ಹಗೂ ಟ್ರೋಪಿಯೊಂದಿಗೆ ತೃತೀಯ ಸ್ಥಾನ ಪಡೆದುಕೊಂಡಿತು. ಭಾನುವಾರ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು.

ADVERTISEMENT

ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್ ನ್ಯಾಯಾಧೀಶರಾದ ಜೆ.ಎನ್‌.ಸುಬ್ರಹ್ಮಣ್ಯ, ಕುಂದಾಪುರ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ನರಹರಿ ಪ್ರಭಾಕರ್ ಮರಾಠೆ, ಬೆಂಗಳೂರು ವಕೀಲರ ಅಸೋಸಿಯೇಷನ್ ಅಧ್ಯಕ್ಷ ರಂಗನಾಥ್‌, ಉದ್ಯಮಿ ಜಿ.ಶಂಕರ್, ಉಡುಪಿ ವಕೀಲರ ಸಂಘದ ಅಧ್ಯಕ್ಷ ದಿವಾಕರ ಎಂ.ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರೆನೋಲ್ಡ್‌ ಪ್ರವೀನ್ ಕುಮಾರ್‌, ನಿತೀಶ್ ಶೆಟ್ಟಿ ಎಕ್ಕಾರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.