ಉಡುಪಿ: ಶ್ರೀಕೃಷ್ಣಮಠದ ಪರಿಸರದಲ್ಲಿರುವ ಮಧ್ವ ಸರೋವರದಲ್ಲಿ ಸ್ನಾನ ಮಾಡಲು ತೆರಳಿದ್ದ ಯಾತ್ರಾತ್ರಿಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಮೃತರನ್ನು ಶಿವಮೊಗ್ಗದ ವಿದ್ಯಾನಗರದ ಆದರ್ಶ್ (39) ಎಂದು ಗುರುತಿಸಲಾಗಿದೆ.
ಈಚೆಗೆ ಶ್ರೀಕೃಷ್ಣಮಠಕ್ಕೆ ದೇವರ ದರ್ಶನಕ್ಕೆ ಆದರ್ಶ್ ಬಂದಿದ್ದರು. ಬೆಳಿಗ್ಗೆ ಸರೋವರದಲ್ಲಿ ಸ್ನಾನಕ್ಕೆ ಇಳಿದಾಗ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾರೆ.
ಅಗ್ನಿ ಶಾಮಕದಳದ ಸಿಬ್ಬಂದಿ ಹಾಗೂ ಮುಳುಗು ತಜ್ಞರು ಸರೋವರದ ಆಳ ಸೇರಿದ್ದ ಶವವನ್ನು ಹೊರತೆಗೆದರು.ಶವವನ್ನು ಜಿಲ್ಲಾಸ್ಪತ್ರೆಯ ಶವಗಾರದಲ್ಲಿಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.