ಉಡುಪಿ: ‘ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅವರು ಪೇಜಾವರ ಶ್ರೀಗಳಿಗೆ ಅರಳು ಮರಳು ಎಂದು ಹೇಳಿರುವುದು ಇಡೀ ಹಿಂದೂ ಸಮಾಜಕ್ಕೆ ನೋವು ತಂದಿದೆ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಅಖಂಡ ಹಿಂದೂ ಧರ್ಮದ ಶ್ರೇಷ್ಠ ಸನ್ಯಾಸಿ, ದೀಕ್ಷೆ ಸ್ವೀಕರಿಸಿ 80 ವರ್ಷಗಳು ಪೂರೈಸುತ್ತಿರುವ ಈ ಸಂದರ್ಭದಲ್ಲಿ ಸ್ವತಃ ರಾಷ್ಟ್ರಪತಿಗಳೇ ಉಡುಪಿಗೆ ಬಂದು ಗೌರವಿಸುತ್ತಿದ್ದಾರೆ. ಇದು ದೇಶದ ಕಾರ್ಯಕ್ರಮವಾಗಿದೆ. ಇಂತಹ ಸಂದರ್ಭದಲ್ಲಿ ದಿನೇಶ್ ಅಮೀನ್ ಮಟ್ಟು ಅವರು ನೀಡಿರುವ ಹೇಳಿಕೆಯಿಂದ ಇಡೀ ಹಿಂದೂ ಧರ್ಮಕ್ಕೆ ನೋವಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.
‘ಬಹುಶಃ ಇಡೀ ದೇಶದ ಪೊಲೀಸ್ ವ್ಯವಸ್ಥೆಯನ್ನು 15 ನಿಮಿಷಗಳ ಕಾಲ ಸ್ಥಗಿತಗೊಳಿಸಿ, ಇಡೀ ಹಿಂದೂ ಧರ್ಮವನ್ನೇ ಮುಗಿಸುತ್ತೇನೆ ಎಂದ ಅಸಾದುದ್ದೀನ್ ಒವೈಸಿ ಅಂತಹವರು ದಿನೇಶ್ ಅಮೀನ್ ಮಟ್ಟು ಅವರಿಗೆ ಬಹಳ ದೊಡ್ಡ ವ್ಯಕ್ತಿಯಾಗಿರಬೇಕು. ಆದ್ದರಿಂದ ಈ ರೀತಿ ಮಾತನಾಡುತ್ತಿದ್ದಾರೆ’ ಎಂದು ಕೋಟ ಟೀಕಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.