ADVERTISEMENT

ಸರಳಬೆಟ್ಟು ವಸತಿ ಸಮುಚ್ಚಯ ಕಾಮಗಾರಿ ಪರಿಶೀಲಿಸಿದ ಶಾಸಕ

​ಪ್ರಜಾವಾಣಿ ವಾರ್ತೆ
Published 20 ಜೂನ್ 2021, 1:02 IST
Last Updated 20 ಜೂನ್ 2021, 1:02 IST
ರಘುಪತಿ ಭಟ್‌, ಶಾಸಕ
ರಘುಪತಿ ಭಟ್‌, ಶಾಸಕ   

ಉಡುಪಿ: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಉಡುಪಿಯ ಸರಳಬೆಟ್ಟುವಿನಲ್ಲಿ ನಿರ್ಮಾಣಗೊಳ್ಳುತ್ತಿರುವ ವಸತಿ ಸಮುಚ್ಛಯ ಸ್ಥಳಕ್ಕೆ ಶನಿವಾರ ಶಾಸಕ ಕೆ.ರಘುಪತಿ ಭಟ್‌ ಅಧಿಕಾರಿಗಳೊಂದಿಗೆ ಭೇಟಿನೀಡಿ ಪರಿಶೀಲಿಸಿದರು.

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಉಡುಪಿಯ ಸರಳೆಬೆಟ್ಟುವಿನಲ್ಲಿ 460 ಮನೆಗಳ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಈಗಾಗಲೇ ಮನೆ ಪಡೆಯಲು ಅರ್ಜಿ ಸಲ್ಲಿಸಿ ಹಣ ಪಾವತಿಸಿರುವ ಅರ್ಹ 240 ಫಲಾನುಭವಿಗಳಿಗೆ ಜೂನ್‌ 21ರಂದು ಲಾಟರಿ ಎತ್ತುವ ಮೂಲಕ ಮನೆ ಹಂಚಿಕೆ ಮಾಡಲಾಗುವುದು.

ಉಡುಪಿ ನಗರಸಭೆಯ ಪೌರಾಯುಕ್ತ ಉದಯ್ ಶೆಟ್ಟಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಮೋಹನ್ ರಾಜ್, ಸಮುದಾಯ ಸಂಘಟನಾಧಿಕಾರಿ ನಾರಾಯಣ್ ಈ ವೇಳೆ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.