ADVERTISEMENT

ಭಾಗವತಿಕೆಯಲ್ಲಿ ಮೋದಿ, ಕಟೀಲ್‌ ಜಪ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2019, 15:06 IST
Last Updated 10 ಸೆಪ್ಟೆಂಬರ್ 2019, 15:06 IST
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಆಗಮಿಸಿದ ನಳಿನ್ ಕುಮಾರ್ ಕಟೀಲ್‌ಗೆ ಭವ್ಯ ಸ್ವಾಗತ ನೀಡಲಾಯಿತು.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಆಗಮಿಸಿದ ನಳಿನ್ ಕುಮಾರ್ ಕಟೀಲ್‌ಗೆ ಭವ್ಯ ಸ್ವಾಗತ ನೀಡಲಾಯಿತು.   

ಉಡುಪಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರ ಅಭಿನಂದನಾ ಸಮಾರಂಭದಲ್ಲಿ ಭಾಗವತಿಕೆ ಕಲಾವಿದರು ಪ್ರಧಾನಿ ನರೇಂದ್ರ ಮೋದಿ ಹಾಗೂ ನಳೀನ್ ಕುಮಾರ್ ಕಟೀಲು ಅವರನ್ನು ಹಾಡಿ ಹೊಗಳಿದರು.

ನಳಿನ್‌ಗೆ ಅಭಿನಂದನೆ ನಡೆಯುತ್ತಿದ್ದ ಸಂದರ್ಭಭಾಗವತರಾದ ಗಣೇಶ್‌ ನೇತೃತ್ವದ ತಂಡ ಕಾಶ್ಮೀರ ಸಮಸ್ಯೆ ಪರಿಹಾರ, ವಿಶ್ವಗುರು ಭಾರತ, ದುಷ್ಟರ ನಿಗ್ರಹ ಶಿಷ್ಟರ ಪಾಲಕ, ವೀರ ಶೂರ ಎಂಬ ಪದಪುಂಜಗಳನ್ನು ಬಳಿಸಿದ ಹಾಡನ್ನು ರಚಿಸಿ ಪ್ರಧಾನಿ ಮೋದಿ, ನಳಿನ್, ಅಮಿತ್ ಶಾ, ಯಡಿಯೂರಪ್ಪ ಅವರನ್ನು ಹಾಡಿ ಹೊಗಳಿತು.

ಹಾಡಿನಿಂದ ಸಂತಸಗೊಂಡ ನಳಿನ್ ಗಣೇಶ್ ಅವರಿಗೆ ಪುಷ್ಪಗುಚ್ಛ ನೀಡಿ ಸನ್ಮಾನಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.