ADVERTISEMENT

ಕೃಷ್ಣನೂರಿನಲ್ಲಿ ನಿಂತು ನವಸಂಕಲ್ಪದ ಮಂತ್ರ ಪಠಿಸಿದ ಮೋದಿ: ಭಾಷಣದ ಮುಖ್ಯಾಂಶಗಳು

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2025, 7:56 IST
Last Updated 28 ನವೆಂಬರ್ 2025, 7:56 IST
   

ಉಡುಪಿ: ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಹಮ್ಮಿಕೊಂಡ ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ನಾಗರಿಕರಿಗೆ ‘ನವ ಸಂಕಲ್ಪ’ ಮಾಡುವಂತೆ ಮನವಿ ಮಾಡಿದರು.

ಎಲ್ಲರೂ ಈ ಒಂಬತ್ತು ಸಂಕಲ್ಪ ಮಾಡಿ; ವರ್ತಮಾನ ಮತ್ತು ಭವಿಷ್ಯಕ್ಕೆ ಇವು ಅಗತ್ಯ ಎಂದು ಒತ್ತಿ ಹೇಳಿದರು. 

  • ಮೊದಲ ಸಂಕಲ್ಪ: ಜಲಸಂರಕ್ಷಣೆ ಮಾಡುವುದು.

    ADVERTISEMENT
  • ಎರಡನೇ ಸಂಕಲ್ಪ: ಮರ ಬೆಳೆಸುವುದು, ತಾಯಿಯ ಹೆಸರಲ್ಲಿ ಒಂದು ಮರ ಅಭಿಯಾನ ಆರಂಭಿಸಿ.

  • ಮೂರನೇ ಸಂಕಲ್ಪ: ಪ್ರತಿಯೊಬ್ಬರೂ ಕನಿಷ್ಠಪಕ್ಷ ಒಬ್ಬ ಬಡವರ ಜೀವನ ಸುಧಾರಿಸಿ.

  • ನಾಲ್ಕನೇ ಸಂಕಲ್ಪ: ಸ್ವದೇಶಿ ಅಳವಡಿಸಿಕೊಳ್ಳಿ. ವೋಕಲ್‌–ಲೋಕಲ್‌ ಮಂತ್ರ ನಮ್ಮದಾಗಲಿದೆ.

  • ಐದನೇ ಸಂಕಲ್ಪ: ನೈಸರ್ಗಿಕ ಕೃಷಿ ಅಳವಡಿಸಿಕೊಳ್ಳಿ.

  • ಆರನೇ ಸಂಕಲ್ಪ: ಆರೋಗ್ಯಪೂರ್ಣ ಜೀವನ ಶೈಲಿ ಅಳವಡಿಸಿಕೊಳ್ಳೋಣ. ಊಟದಲ್ಲಿ ಎಣ್ಣೆ ಕಡಿಮೆ ಮಾಡೋಣ, ಸಿರಿಧಾನ್ಯ ಬಳಸೋಣ.

  • ಏಳನೇ ಸಂಕಲ್ಪ: ಯೋಗ ಅಳವಡಿಸಿಕೊಳ್ಳಿ, ಎಲ್ಲರೂ ಯೋಗಿಗಳಾಗಿ.

  • ಎಂಟನೇ ಸಂಕಲ್ಪ: ಹಸ್ತಪ್ರತಿ ಸಂರಕ್ಷಣೆಗೆ ಸಹಯೋಗ ನೀಡಿ. 

  • ಒಂಬತ್ತನೇ ಸಂಕಲ್ಪ: ಕನಿಷ್ಠ ಪಕ್ಷ ದೇಶದ 25 ಪುಣ್ಯ ಕ್ಷೇತ್ರಗಳ ದರ್ಶನ ಮಾಡುತ್ತೇನೆ ಎಂಬ ಸಂಕಲ್ಪ ಮಾಡಿ.

2047 ಅಮೃತ ಕಾಲದ ಗುರಿಯನ್ನು ನನಸಾಗಿಸಲು ಭಾರತೀಯರು ಎಲ್ಲರೂ ತಮ್ಮ ಕರ್ತವ್ಯ ನಿಭಾಯಿಸಬೇಕು. ವಿಕಸಿತ ಕರ್ನಾಟಕ; ವಿಕಸಿತ ಭಾರತ ಸಂಕಲ್ಪ ನಮ್ಮದಾಗಲಿ ಎಂದರು.

ಮೋದಿ ಮಾತು:

ಎಲ್ಲರಿಗೂ ನಮಸ್ಕಾರ.. ಕನ್ನಡದಲ್ಲಿ ಮಾತು ಆರಂಭಿಸಿದರು. ಜೈ ಶ್ರೀಕೃಷ್ಣ ಘೋಷಣೆ ಹಾಕಿದರು.

  • ತಮ್ಮ ಭಾವಚಿತ್ರ ಹಿಡಿದು ನಿಂತಿದ್ದವರಿಂದ ಮೋದಿ ಅವುಗಳನ್ನು ಪಡೆದುಕೊಳ್ಳುವಂತೆ ಎಸ್‌ಪಿಜಿ ಅವರಿಗೆ ಸೂಚಿಸಿದರು. ಹಿಂದೆ ವಿಳಾಸ ಬರೆಯಿರಿ. ನಾನು ಅಭಿನಂದನಾ ಪತ್ರ ಕಳಿಸುವೆ ಎಂದು ಹೇಳಿ ಸಮಾಧಾನ ಪಡಿಸಿದರು.

  • ಜನಸಂಘ ಮತ್ತು ಮತ್ತು ಬಿಜೆಪಿಯ ಉತ್ತಮ ಆಡಳಿತದ ಮಾದರಿಯ ಕರ್ಮಭೂಮಿ ಉಡುಪಿ.ವಿಎಸ್‌ ಆಚಾರ್ಯ ಮತ್ತಿತರರ ಸ್ಮರಣೆ.

  • ಲಕ್ಷ ಕಂಠ ಗೀತಾ ಪಠಣ ಅಭಿಯಾನ ಹಮ್ಮಿಕೊಂಡಿರುವ ಸುಗುಣೇಂದ್ರ ಶ್ರೀಗೆ ಅಭಿನಂದನೆ. ಈದು ಸನಾತನ ಸಂಸ್ಕೃತಿ ಅಭಿಯಾನ. ಇದರಿಂದ ನನಗೆ ಬಹಳ ಪ್ರೇರಣೆ ಸಿಕ್ಕಿದೆ.

  • ಭಗವದ್ಗೀತೆಯೊಂದಿಗೆ ನವಪೀಳಿಗೆಯನ್ನು ಜೋಡಿಸುವ ಸತ್ಕಾರ್ಯ ಇದು.

  • 25 ನವೆಂಬರ್‌ರಂದು ನಾನು ಅಯೋಧ್ಯೆಯಲ್ಲಿದ್ದೆ. ಅಯೋಧ್ಯೆಯ ರಾಮಮಂದಿರದ ಮೇಲೆ ಧರ್ಮಧ್ವಜದ ಸ್ಥಾಪನೆಯಾಗಿದೆ. ಅಯೋಧ್ಯೆಯಿಂದ ಉಡುಪಿ ವರೆಗೆ ಅಸಂಖ್ಯ ರಾಮಭಕ್ತರು ಸಂತುಷ್ಟರಾಗಿದ್ದಾರೆ. ರಾಮಮಂದಿರ ಹೋರಾಟದ ಹಾದಿ ಎಲ್ಲರಿಗೂ ಗೊತ್ತಿದೆ. 

  • ಜಗದ್ಗುರು ಮಧ್ವಾಚಾರ್ಯರಿಂದ ಸ್ಥಾಪನೆಯಾದ ಉಡುಪಿಯಲ್ಲಿ ವೇದಾನಂತ ಅಧ್ಯಯನ, ಭಗವಾನ್‌ ಶ್ರೀಕೃಷ್ಣನ ಆರಾಧನೆ ಇದೆ. ಲಕ್ಷಾಂತರ ಭಕ್ತರಿಗೆ ಅನ್ನದಾನ ಸೇವೆ ಇದೆ. ಇದು ಭಕ್ತಿ, ಆಧ್ಯಾತ್ಮಿಕತೆಯ ಸಂಗಮ ತೀರ್ಥವಾಗಿದೆ.

  • ಮಧ್ವಾಚಾರ್ಯರೊಂದಿಗೆ ದಾಸ ಪರಂಪರೆಯೂ ಇಲ್ಲಿಯ ಇನ್ನೊಂದು ಕೊಡುಗೆ.

  • ಕನಕದಾಸರ ಭಕ್ತಿಯೂ ದೊಡ್ಡದು.

  • ಲೋಕ ಕಲ್ಯಾಣದ ಸಂದೇಶ ಭಗವದ್ಗೀತೆಯಲ್ಲಿದೆ. ಸರ್ವಜನ ಸುಖಾಯ–ಸರ್ವಜನ ಹಿತಾಯ, ಸಬ್‌ಕಾ ಸಾಥ್‌–ಸಬ್‌ಕಾ ವಿಕಾಸ ಇದು ಭಗವದ್ಗೀತೆಯಿಂದ ಬಂದ ಪ್ರೇರಣೆ. 

  • ಭಗವಾನ್‌ ಶ್ರೀಕೃಷ್ಣನ ಸಂದೇಶ ಪಾಲನೆಗಾಗಿ ಅತ್ಯಾಚಾರಿಗಳ ಅಂತ್ಯವೂ ಅಗತ್ಯವಾಗಿದೆ.

  • ಧರ್ಮ ರಕ್ಷಣೆ; ದುಷ್ಟ ಸಂಹಾರವೂ ನಮಗೆ ಗೊತ್ತು. ಧರ್ಮಸಂದೇಶವನ್ನೂ ಕೊಡುತ್ತೇವೆ; ಅದರ ಜೊತೆಗೆ ಮಿಷನ್‌ ಸುದರ್ಶನ ಚಕ್ರದ ಪ್ರಯೋಗವನ್ನೂ ಮಾಡುತ್ತೇವೆ. ದೇಶವಿರೋಧಿಗಳ ಮೇಲೆಗೆ ನಮ್ಮ ಸುದರ್ಶನ ಚಕ್ರ ಪ್ರಯೋಗ. ಆಪರೇಷನ್‌ ಸಿಂದೂರು ಮೆಲಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.