ADVERTISEMENT

ಕೋಟ| ಕಾರ್ಮಿಕ ಇಲಾಖೆ ಅಧಿಕಾರಿಗಳ ದಾಳಿ: ಹತ್ತಕ್ಕೂ ಹೆಚ್ಚು ಬಾಲಕಾರ್ಮಿಕರ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2022, 12:22 IST
Last Updated 25 ಆಗಸ್ಟ್ 2022, 12:22 IST
ಕೋಟತಟ್ಟು ಪಡುಕೆರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಮೀನು ಘಟಕದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಬಾಲಕಾರ್ಮಿಕರನ್ನು ರಕ್ಷಿಸಲಾಗಿದೆ
ಕೋಟತಟ್ಟು ಪಡುಕೆರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಮೀನು ಘಟಕದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಬಾಲಕಾರ್ಮಿಕರನ್ನು ರಕ್ಷಿಸಲಾಗಿದೆ   

ಕೋಟ(ಬ್ರಹ್ಮಾವರ): ಕೋಟತಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಟತಟ್ಟು ಪಡುಕೆರೆ ಅರಮದೇವಸ್ಥಾನ ಬಳಿ ಖಾಸಗಿ ಮೀನು ಕಟ್ಟಿಂಗ್ ಶೆಡ್ ಮೇಲೆ ಉಡುಪಿ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ ಹತ್ತಕ್ಕೂ ಹೆಚ್ಚು ಮಕ್ಕಳನ್ನು ರಕ್ಷಿಸಿದ ಘಟನೆ ನಡೆದಿದೆ.

ಕಾರ್ಮಿರ ಬಗ್ಗೆ ಆರೋಗ್ಯ ಮಾಹಿತಿ ಪಡೆಯಲು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಸಲಹೆಯ ಮೇರೆಗೆ ಆರೋಗ್ಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸುವ ಸಂದರ್ಭ ಬಾಲಕಾರ್ಮಿಕರು ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ.

ಕಾರ್ಖಾನೆಯ ಮುಖ್ಯಸ್ಥರಿಗೆ ಮಕ್ಕಳನ್ನು ಸ್ಥಳಾಂತರಿಸಲು ಸಲಹೆ ನೀಡಿ ಅಲ್ಲಿರುವ ತಾಯಂದಿರ ಆರೋಗ್ಯ ವಿಚಾರಿಸಿ ಸಿಬ್ಬಂದಿ ಹಿಂದಿರುಗಿದ್ದರು. ನಂತರ ಉಡುಪಿ ಜಿಲ್ಲಾ ಕಾರ್ಮಿಕ ಇಲಾಖೆ ಹಾಗೂ ಸ್ಥಳೀಯ ಪಂಚಾಯಿತಿ ಸೇರಿದಂತೆ ಇತರ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಬಾಲಕಾರ್ಮಿಕರು ಕಾರ್ಯನಿರ್ವಹಿಸುತ್ತಿರುವ ಕುರಿತು ಮಾಹಿತಿ ಪಡೆದು ಪ್ರಕರಣ ದಾಖಲಿಸಿಕೊಂಡು ಮಕ್ಕಳನ್ನು ಉಡುಪಿ ನಿಟ್ಟೂರಿನ ಬಾಲಾಶ್ರಮಕ್ಕೆ ಸ್ಥಳಾಂತರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.