ಶಿರ್ವ: ಇಲ್ಲಿನ ಹಿಂದು ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿ ಹಾಗೂ ಅಮೆರಿಕದ ವೈದ್ಯ ಡಾ.ಚಂದ್ರಶೇಖರ್ ಶೆಟ್ಟಿ ಸ್ಥಾಪಿಸಿರುವ ವಿನೋದ್ ಮತ್ತು ಚಂದ್ರಶೇಖರ ಶೆಟ್ಟಿ ಕಾಪು ಫೌಂಡೇಷನ್ ವತಿಯಿಂದ ವಿದ್ಯಾವರ್ಧಕ ಸಂಘದ ಆಡಳಿತಕ್ಕೊಳಪಟ್ಟ ಹಿಂದು ಪದವಿಪೂರ್ವ ಕಾಲೇಜು, ಹಿಂದು ಪ್ರೌಢಶಾಲೆ ಹಾಗೂ ವಿದ್ಯಾವರ್ಧಕ ಆಂಗ್ಲಮಾಧ್ಯಮ ಶಾಲೆಯ 105 ವಿದ್ಯಾರ್ಥಿಗಳಿಗೆ ₹ 1.27 ಲಕ್ಷ ಮೊತ್ತದ ವಿದ್ಯಾರ್ಥಿ ವೇತನವನ್ನು ಹಿಂದು ಪದವಿ ಪೂರ್ವ ಕಾಲೇಜಿನಲ್ಲಿ
ಈಚೆಗೆ ನಡೆದ ಸಮಾರಂಭದಲ್ಲಿ ವಿತರಿಸಲಾಯಿತು.
ಮುಖ್ಯ ಅತಿಥಿಯಾಗಿದ್ದ ಫೌಂಡೇಷನ್ನ ಟ್ರಸ್ಟಿ ಸೀಮಾ ಹರೀಶ್ ರೈ ಅವರು ವಿದ್ಯಾರ್ಥಿ ವೇತನ ವಿತರಿಸಿದರು. ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ಪ್ರೊ.ವೈ. ಭಾಸ್ಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಭಾಸ್ಕರ ಎ. ಸ್ವಾಗತಿಸಿದರು. ಶಿಕ್ಷಕಿ ಸುಪ್ರೀತಾ ಕಾರ್ಯಕ್ರಮ ನಿರೂಪಿಸಿದರು.
ಪ್ರೌಢಶಾಲಾ ಮುಖ್ಯಶಿಕ್ಷಕಿ ವಸಂತಿಬಾಯಿ ವಂದಿಸಿದರು. ಉಪನ್ಯಾಸಕ ಸುಂದರ ಮೇರ ಮತ್ತು ಶಿಕ್ಷಕಿ ವೀಣಾ ವಿದ್ಯಾರ್ಥಿ ವೇತನ ಪಡೆದವರ ಪಟ್ಟಿ ವಾಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.