ADVERTISEMENT

ಕೊಲೆ ಪ್ರಕರಣ: ಆರೋಪಿಗಳು 17ರವರೆಗೆ ಪೊಲೀಸರ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2020, 9:10 IST
Last Updated 13 ಫೆಬ್ರುವರಿ 2020, 9:10 IST

ಉಡುಪಿ: ಮುಂಬೈ ಮೂಲದ ಬಾರ್‌ ಉದ್ಯಮಿ ವಶಿಷ್ಟ ಸತ್ಯನಾರಾಯಣ ಯಾದವ್ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಬುಧವಾರ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಆರೋಪಿಗಳಾದ ಸುಮಿತ್ ಮಿಶ್ರಾ, ಅಬ್ದುಲ್ ಶುಕೂರ್, ಅವಿನಾಶ್ ಕರ್ಕೆರಾ, ಮೊಹಮ್ಮದ್ ಶರೀಪ್‌ನನ್ನು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ನೀಡಬೇಕು ಎಂಬ ಮನವಿಯನ್ನು ಪುರಸ್ಕರಿಸಿದ ನ್ಯಾಯಾಧೀಶರು ಫೆ.17ರವರೆಗೂ ಆರೋಪಿಗಳನ್ನು ಪೊಲೀಸರ ವಶಕ್ಕೆ ಒಪ್ಪಿಸಿ ಆದೇಶಿಸಿದರು.

ಉದ್ಯಮಿ ಕೊಲೆಗೆ ಕಾರಣ ಹಾಗೂ ಕೈವಾಡದ ಎಂಬ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಭಾನುವಾರ ರಾತ್ರಿ ಆರೋಪಿಗಳು ವಶಿಷ್ಟರನ್ನು ಕೊಲೆಮಾಡಿ ಶವವನ್ನು ಹಿರಿಯಡ್ಕದ ಬೆಳ್ಳಂಪಳ್ಳಿಯ ರಸ್ತೆ ಬದಿಯ ಪೊದೆಗೆ ಎಸೆದಿದ್ದರು. ಮಂಗಳವಾರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.