ಶಾಸಕ ಗುರುರಾಜ ಗಂಟಿಹೊಳೆ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ ಉದ್ಘಾಟಿಸಿದರು
ಬೈಂದೂರು: ‘ನಾರಾಯಣಗುರುಗಳ ವಿಚಾರಧಾರೆ, ತತ್ವಾದರ್ಶಗಳು ಸಮಾಜದಲ್ಲಿ ಸಾಮರಸ್ಯ ಮೂಡಿಸಲು ಸಹಕಾರಿಯಾಗಿವೆ. ಅವು ಸಾರ್ವಕಾಲಿಕವಾಗಿದ್ದು, ಜನರು ಜೀವನದಲ್ಲಿ ಅಳವಡಿಸಿಕೊಂಡಾಗ ಸಾರ್ಥಕವಾಗುತ್ತದೆ’ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.
ಇಲ್ಲಿನ ಕ್ಷೇತ್ರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಭಾನುವಾರ ಜೆ.ಎನ್.ಆರ್. ಸಭಾಭವನದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಶಿವರಾಜ ಪೂಜಾರಿ ಗೋಳಿಹೊಳೆ ಮಾತನಾಡಿ, ನಾರಾಯಣಗುರುಗಳು ಶೋಷಿತ ಸಮಾಜದ ಏಳಿಗೆಗಾಗಿ ದುಡಿದ ಮಾಹನ್ ದಾರ್ಶನಿಕರು. ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕಾರ್ಯವಾಗಬೇಕು ಎಂದರು.
ಸಾರ್ವಜನಿಕರಿಗಾಗಿ ನಾರಾಯಣ ಗುರುಗಳ ಬಗ್ಗೆ ಚಿತ್ರಕಲೆ ಸ್ಪರ್ಧೆ, ಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಕುಣಿತ ಭಜನಾ ಸ್ಪರ್ಧೆ, ಜಾನಪದ ನೃತ್ಯ ವೈಭವ ಸ್ಪರ್ಧೆ ಸೇರಿದಂತೆ ಹಲವು ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಕ್ಷೇತ್ರ ಬಿಜೆಪಿ ಅಧ್ಯಕ್ಷೆ ಅನಿತಾ ಆರ್.ಕೆ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್, ಹಿಂದುಳಿದ ವರ್ಗಗಳ ಜಿಲ್ಲಾ ಮೋರ್ಚಾ ಅಧ್ಯಕ್ಷ ವಿಜಯ್ ಕಡೂರು, ಪ್ರಧಾನ ಕಾರ್ಯದರ್ಶಿಗಳಾದ ಕರುಣ್ ಪೂಜಾರಿ, ಗೋಪಾಲ ಪೂಜಾರಿ, ಹಿಂದುಳಿದ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕೊಠಾರಿ, ಜಿಲ್ಲಾ ಹಿಂದುಳಿದ ಮೋರ್ಚಾ ಕಾರ್ಯದರ್ಶಿ ಚಂದ್ರ ಜೋಗಿ ಶಾನ್ಕಟ್ಟು, ಉಪಾಧ್ಯಕ್ಷರಾದ ರಾಜಶೇಖರ ದೇವಾಡಿಗ, ವಿನೋದ್ ಕುಮಾರ್ ಗುಜ್ಜಾಡಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಉಮೇಶ ಕಂಡ್ಲೂರು, ಬೈಂದೂರು ಪಟ್ಟಣ ಪಂಚಾಯಿತಿ ಹಿಂದುಳಿದ ಮೋರ್ಚಾ ಅಧ್ಯಕ್ಷ ಚಂದ್ರಶೇಖರ ದೇವಾಡಿಗ, ಸಂತೋಷ ಪೂಜಾರಿ ನೇರಳಕಟ್ಟೆ, ಯುವಮೋರ್ಚಾ ಅಧ್ಯಕ್ಷ ಗಜೇಂದ್ರ ಬೆಲೆಮನೆ, ಎಸ್ಸಿ ಮೋರ್ಚಾ ಅಧ್ಯಕ್ಷ ಅಶೋಕ್ ಎನ್.ಡಿ., ಎಸ್ಟಿ ಮೋರ್ಚಾ ಅಧ್ಯಕ್ಷ ರಾಮ ನಾಯ್ಕ, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಅಂತೋನಿ ಡಿಸಿಲ್ವ, ರೈತಮೋರ್ಚಾ ಅಧ್ಯಕ್ಷ ಪ್ರಕಾಶ ಶೆಟ್ಟಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ಯಾಮಲಾ ಕುಂದರ್, ರಾಜ್ಯ ಮೀನುಗಾರಿಕಾ ಪ್ರಕೋಷ್ಠದ ಆನಂದ ಖಾರ್ವಿ, ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ವಿಠಲ ಪೂಜಾರಿ ಐರೋಡಿ, ಜಿಲ್ಲಾ ಒಬಿಸಿ ಮೋರ್ಚಾ ಕಾರ್ಯದರ್ಶಿ ರವೀಂದ್ರ ತಿಂಗಳಾಯ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ಜಿಲ್ಲಾ ಒಬಿಸಿ ಮೋರ್ಚಾ ಕಾರ್ಯದರ್ಶಿ ಸಂತೋಷ ಪೂಜಾರಿ ಭಾಗವಹಿಸಿದ್ದರು. ಒಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುನಾಥ ದೇವಾಡಿಗ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.