ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಇದೇ 24ರ ಮಹಾನವಮಿಯ ದಿನ ರಥೋತ್ಸವ ನಡೆಯಲಿದ್ದು, ಅಂದು ಸಂಜೆ 5 ಗಂಟೆಯಿಂದ ಸಾರ್ವಜನಿಕರಿಗೆ ದೇವರ ದರ್ಶನವನ್ನು ನಿರ್ಬಂಧಿಸಲಾಗಿದೆ ಎಂದು ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಅರವಿಂದ ಸುತಗುಂಡಿ ತಿಳಿಸಿದ್ದಾರೆ.
ಕೊರೊನಾ ಸೋಂಕು ಹರಡುವಿಕೆ ತಡೆಗೆ ದೇವಸ್ಥಾನದ ಆವರಣದೊಳಗೆ ಅರ್ಚಕರು, ಪುರೋಹಿತರು, ಸಿಬ್ಬಂದಿ ಸಮ್ಮುಖದಲ್ಲಿ ರಥೋತ್ಸವ ನಡೆಯಲಿದೆ. ಸಾರ್ವಜನಿಕರ ಭಾಗವಹಿಸುವಿಕೆಗೆ ಅವಕಾಶ ಇರುವುದಿಲ್ಲ. 25ರ ವಿಜಯದಶಮಿ ದಿನ ಮುಂಜಾನೆ 4ರಿಂದ ದೇವಸ್ಥಾನದಲ್ಲಿ ವಿದ್ಯಾರಂಭ ಆರಂಭವಾಗಲಿದ್ದು, ದಂಪತಿ ಸಹಿತ ಮಗುವಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.