ಉಡುಪಿ: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಠಕ್ಕೆ ಹಣ ಕೊಟ್ಟರೆ ಸ್ವೀಕರಿಸುವುದಿಲ್ಲ ಎಂದು ಸಾಣೆಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಗಳು ಹೇಳಿದರು.
ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಮಠದ ಯೋಜನೆಗಳಿಗೆ ಅನುದಾನ ನೀಡಿದರೆ ಮಾತ್ರ ಸ್ವೀಕರಿಸುತ್ತೇವೆ. ಅದಕ್ಕೆ ಲೆಕ್ಕಪತ್ರವನ್ನೂ ಸರ್ಕಾರಕ್ಕೆ ಸಲ್ಲಿಸುತ್ತೇವೆ. ನೇರವಾಗಿ ಹಣ ಕೊಟ್ಟರೆ ಸ್ವೀಕಾರ ಮಾಡುವುದಿಲ್ಲ ಎಂದು ಸಾಣೆಹಳ್ಳಿ ಶ್ರೀಗಳು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.