ADVERTISEMENT

ಉಡುಪಿ ಜಿಲ್ಲಾ ಕನ್ನಡ ಜಾಗೃತಿ ಸಮಿತಿಗೆ ನೇಮಕ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2020, 16:34 IST
Last Updated 23 ನವೆಂಬರ್ 2020, 16:34 IST
ಪ್ರದೀಪ್‌ಚಂದ್ರ ಕುತ್ಪಾಡಿ, ರಂಗಕರ್ಮಿ
ಪ್ರದೀಪ್‌ಚಂದ್ರ ಕುತ್ಪಾಡಿ, ರಂಗಕರ್ಮಿ   

ಉಡುಪಿ: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕನ್ನಡ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರನ್ನು ನಾಮ ನಿರ್ದೇಶನ ಮಾಡಲಾಗಿದೆ.

ರಂಗಭೂಮಿ ಕಲಾವಿದರಾದ ಪ್ರದೀಪ್ ಚಂದ್ರ ಕುತ್ಪಾಡಿ, ಸುಕುಮಾರ್‌ ಮೋಹನ್‌, ದೀಪಿಕಾ ಭಟ್‌, ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಹಾಗೂ ಶಿಲ್ಪಾ ಜೋಶಿ ಅವರನ್ನು ನೇಮಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT