ADVERTISEMENT

ಗೌರವ ಸ್ವೀಕರಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2021, 2:52 IST
Last Updated 7 ಆಗಸ್ಟ್ 2021, 2:52 IST
ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಕಾಪು ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಕಾಪುವಿನಲ್ಲಿ ಸ್ವಾಗತಿಸಿ, ಗೌರವಿಸಲಾಯಿತು.
ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಕಾಪು ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಕಾಪುವಿನಲ್ಲಿ ಸ್ವಾಗತಿಸಿ, ಗೌರವಿಸಲಾಯಿತು.   

ಕಾಪು (ಪಡುಬಿದ್ರಿ): ‘ಸಿಕ್ಕಿದ ಅವಕಾಶದಲ್ಲಿ ಕೊಟ್ಟ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುವುದರೊಂದಿಗೆ, ಪಕ್ಷ ಸಂಘಟನೆಗೂ ವಿಶೇಷ ಒತ್ತು ನೀಡಲಾಗುವುದು. ಯಾವುದೇ ಖಾತೆಯನ್ನು ನೀಡಿದರೂ ಯಶಸ್ವಿಯಾಗಿ ಕಾರ್ಯನಿರ್ವಹಿಸುವ ವಿಶ್ವಾಸವಿದೆ’ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡಿದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಕಾಪು ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಸ್ವಾಗತಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.

ಕಾಪು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸಂದೀಪ್ ಶೆಟ್ಟಿ ಕಲ್ಯಾ, ಕಾಪು ಪುರಸಭಾ ನಿಕಟಪೂರ್ವ ಅಧ್ಯಕ್ಷ ಅನಿಲ್ ಕುಮಾರ್, ಬಿಜೆಪಿ ಕಾಪು ಮಂಡಲ ಉಪಾಧ್ಯಕ್ಷ ನವೀನ್ ಎಸ್.ಕೆ., ಮಹಿಳಾ ಮೋರ್ಚಾ ಅಧ್ಯಕ್ಷೆ ಸುಮಾ ಶೆಟ್ಟಿ, ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಸಂತೋಷ್ ಕುಮಾರ್ ಮೂಡುಬೆಳ್ಳೆ, ಹಿಂದುಳಿದ ಮೋರ್ಚಾ ಕಾಪು ಮಹಾ ಶಕ್ತಿ
ಕೇಂದ್ರದ ಅಧ್ಯಕ್ಷ ಯೋಗೀಶ್ ಪೂಜಾರಿ, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರವೀಣ್ ಕುಮಾರ್, ಸದಸ್ಯ ರಾಘವೇಂದ್ರ ರಾವ್, ಪಕ್ಷದ ಮುಖಂಡರಾದ ಸತೀಶ್ ಪೂಜಾರಿ ಉದ್ಯಾವರ, ಅರುಣ್ ಶೆಟ್ಟಿ ಪಾದೂರು, ರಮೇಶ್ ಹೆಗ್ಡೆ ಕಲ್ಯಾ, ದಿನೇಶ್ ಶೆಟ್ಟಿ ಕಲ್ಯಾ, ಶಶಿಪ್ರಭಾ ಶೆಟ್ಟಿ, ಕೇಸರಿ ಯುವರಾಜ್, ಸುರೇಖಾ ಶೈಲೇಶ್ ಮೊದಲಾದವರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.