ಬೈಂದೂರು: ‘ವಿದ್ಯಾರ್ಥಿಗಳಿಗೆ ಬೇಕಾದ ಸೌಕರ್ಯವನ್ನು ಟ್ರಸ್ಟ್ ವತಿಯಿಂದ ಒದಗಿಸಲಾಗುತ್ತದೆ. ಈ ಶಾಲೆಯ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು’ ಎಂದು ಉಪ್ಪುಂದ ಶ್ರೀವರಲಕ್ಷ್ಮಿ ಚಾರಿಟಬಲ್ ಟ್ರಸ್ಟ್ನ ಗೋವಿಂದ ಬಾಬು ಪೂಜಾರಿ ಹೇಳಿದರು.
ಬಿಜೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ- ಪೋಷಕ ಸಭೆಯಲ್ಲಿ ಟ್ರಸ್ಟ್ ವತಿಯಿಂದ ನೀಡಿದ 1ಲಕ್ಷಕ್ಕೂ ಅಧಿಕ ನೋಟ್ ಪುಸ್ತಕ ಮತ್ತು ಆಂಗ್ಲ ಮಾಧ್ಯಮ ಪುಸ್ತಕ ವಿತರಿಸಿ ಅವರು ಮಾತನಾಡಿದರು.
ಎಸ್ಡಿಎಂಸಿ ಅಧ್ಯಕ್ಷೆ ಶಾರದಾ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಸದಸ್ಯ ರಾಜೇಂದ್ರ ಬಿಜೂರ್, ಟ್ರಸ್ಟ್ ಸಂಯೋಜಕ ನಾಗರಾಜ್ ಪಿ. ಇದ್ದರು. ಮುಖ್ಯ ಶಿಕ್ಷಕ ಮಂಜುನಾಥ ಎಸ್. ಬಿಜೂರು ಸ್ವಾಗತಿಸಿದರು. ಗೌರವ ಶಿಕ್ಷಕಿಯರಾದ ಭಾರತಿ ನಿರೂಪಿಸಿದರು. ಪ್ರತಿಮಾ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.