ಉಡುಪಿ: ಈಚೆಗೆ ನಿಧನರಾದ ನಿವೃತ್ತ ಉಪನ್ಯಾಸಕ ಪ್ರೊ. ಹೆರಂಜೆ ಕೃಷ್ಣ ಭಟ್ ಅವರ ಸ್ಮರಣಾರ್ಥ ಉಡುಪಿಯ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಬುಧವಾರ ನುಡಿನಮನ ಕಾರ್ಯಕ್ರಮ ಜರುಗಿತು.
ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಶ್ರೀಪಾದರು ಮಾತನಾಡಿ, ಹೆರಂಜೆ ಕೃಷ್ಣ ಭಟ್ ಅವರು ಅತ್ಯಂತ ಜವಾಬ್ದಾರಿಯಿಂದ ಎಲ್ಲ ಕೆಲಸವನ್ನೂ ನಿಭಾಯಿಸುತ್ತಿದ್ದರು. ಎಲ್ಲರೂ ಅವರನ್ನು ಮಿತಭಾಷಿ ಎನ್ನುತ್ತಾರೆ. ನಮ್ಮೊಂದಿಗೆ ಗಂಟೆಗಳ ಕಾಲ ವಿವಿಧ ವಿಚಾರ-ವಿಷಯಗಳಿಗೆ ಮನಸ್ಸು ಬಿಚ್ಚಿ ಮಾತನಾಡುತ್ತಿದ್ದರು ಎಂದು ಹೇಳಿದರು.
ಪರ್ಯಾಯ ಪುತ್ತಿಗೆ ಮಠದ ಕಿರಿಯ ಯತಿ ಸುಶ್ರೀಂದ್ರ ತೀರ್ಥರು ಮಾತನಾಡಿದರು. ಎಂ.ಎಲ್. ಸಾಮಗ, ಪಾದೆಕಲ್ಲು ವಿಷ್ಣು ಭಟ್, ಎಂ.ಪ್ರಭಾಕರ ಜೋಶಿ, ಕೆ.ಪಿ. ರಾವ್, ರಾಘವ ನಂಬಿಯಾರ್, ಭಾಸ್ಕರಾನಂದ ಕುಮಾರ, ಪ್ರದೀಪ ಕಲ್ಕೂರ, ಹರಿರಾಮ ಆಚಾರ್ಯ, ಎನ್.ಟಿ. ಭಟ್ ನುಡಿನಮನ ಸಲ್ಲಿಸಿದರು.
ಮಠದ ದಿವಾನ ನಾಗರಾಜ ಆಚಾರ್ಯ, ವಿದೇಶ ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ಶ್ರೀಗಳ ಆಪ್ತ ಕಾರ್ಯದರ್ಶಿ ರತೀಶ ತಂತ್ರಿ, ಮಹಿತೋಷ ಆಚಾರ್ಯ, ರಮೇಶ ಭಟ್, ಬಿ.ಗೋಪಾಲ ಆಚಾರ್ಯ ಇದ್ದರು.
ಉಡುಪಿ ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್ ಕಾರ್ಯಕ್ರಮ ನಿರ್ವಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.