ಬ್ರಹ್ಮಾವರ: ಕೋವಿಡ್ ಸಂಕಷ್ಟ ಪರಿಸ್ಥಿತಿಯಲ್ಲಿ ಜನಜಾಗೃತಿ ಉಂಟುಮಾಡುವ ಉದ್ದೇಶ ಹೊಂದಿ ಹಂಗಾರಕಟ್ಟೆ ಐರೋಡಿ ಯಕ್ಷಗಾನ ಕಲಾಕೇಂದ್ರದ ಆಶ್ರಯದಲ್ಲಿ ಕಲಾಕೇಂದ್ರದ ಶಿಷ್ಯವೃಂದವು ಯಕ್ಷಾಮೃತ ಎಂಬ ಕಾರ್ಯಕ್ರಮದಡಿಯಲ್ಲಿ ಕೊರೊನಾ ಯಕ್ಷಗಾಯನ-ಗಾನಾಮೃತ ಎಂಬ ಕಾರ್ಯಕ್ರಮವನ್ನು 23ರಂದು ಹಮ್ಮಿಕೊಂಡಿದೆ.
‘ಪ್ರಜಾವಾಣಿ’ ಫೇಸ್ಬುಕ್ ಪೇಜ್ನಲ್ಲಿ ಶನಿವಾರ ಬೆಳಿಗ್ಗೆ 10ಗಂಟೆಯಿಂದ ವಿಷ್ಣುಮೂರ್ತಿ ಬೇಳೂರು ಸಂಯೋಜನೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕೆ.ಪಿ.ಹೆಗಡೆ, ನಾರಾಯಣ ಶಬರಾಯ, ರಾಘವೇಂದ್ರ ಮಯ್ಯ, ಸುರೇಶ ಶೆಟ್ಟಿ, ಉಮೇಶ ಸುವರ್ಣ ಕಾನಗೋಡು ಪರಮೇಶ್ವರ ನಾಯ್ಕ, ಉದಯಕುಮಾರ ಹೋಸಾಳ, ಕರುಣಾಕರ ಶೆಟ್ಟಿ, ಗಜೇಂದ್ರ ಶೆಟ್ಟಿ, ಗಣೇಶ ಆಚಾರ್, ಎನ್.ಜಿ.ಹೆಗಡೆ, ರಾಘವೇಂದ್ರ ಹೆಗಡೆ, ಶಿವಾನಂದ ಕೋಟ, ರಾಕೇಶ ಮಲ್ಯ ಕಲಾವಿದರು ಭಾಗವಹಿಸಲಿದ್ದಾರೆ ಎಂದು ಕಲಾಕೇಂದ್ರದ ಕಾರ್ಯದರ್ಶಿ ರಾಜಶೇಖರ್ ಹೆಬ್ಬಾರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.