ಉಡುಪಿ: ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿಗೆ ಕೇಂದ್ರ ಸರ್ಕಾರ ಹಿಂದೆ, ಘೋಷಿಸಿದ್ದ ಮರಣೋತ್ತರ ಪದ್ಮ ವಿಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ ನ.8ರಂದು ದೆಹಲಿಯಲ್ಲಿ ನಡೆಯಲಿದ್ದು, ಪ್ರಶಸ್ತಿ ಸ್ವೀಕರಿಸುವಂತೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗೆ ದೂರವಾಣಿ ಮೂಲಕ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.
ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಕ್ಕೆ ವಿಶ್ವೇಶತೀರ್ಥ ಶ್ರೀಗಳು ನೀಡಿದ ಕೊಡುಗೆ ಆಧರಿಸಿ ಕೇಂದ್ರ ಸರ್ಕಾರ 2020ನೇ ಸಾಲಿನ ಪದ್ಮವಿಭೂಷಣ ಪ್ರಶಸ್ತಿ ಘೋಷಿಸಿತ್ತು. ಕೋವಿಡ್ನಿಂದಾಗಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿರಲಿಲ್ಲ.
ಸಚಿವ ಗೋವಿಂದ ಕಾರಜೋಳ ಅವರು ಟ್ವೀಟ್ ಮೂಲಕ ಪೇಜಾವರ ಶ್ರೀಗಳಿಗೆ ಪದ್ಮ ವಿಭೂಷಣ ಪ್ರಶಸ್ತಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.