ಶಿರ್ವ: ಕುತ್ಯಾರು ಗ್ರಾ.ಪಂ. ವ್ಯಾಪ್ತಿಯ ತಾರಬರಿ ಪ್ರಮೀಳಾ ವಾಮನ ಆಚಾರ್ಯ ಅವರ ಮನೆಗೆ ಗಾಳಿ ಮಳೆಗೆ ಹಾನಿ ಉಂಟಾಗಿದ್ದು, ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಶನಿವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಮಾತನಾಡಿದ ಅವರು, ಶೀಘ್ರ ನಷ್ಟದ ಪ್ರಮಾಣ ಅಂದಾಜು ಪಟ್ಟಿ ತಯಾರಿಸಿ ಗರಿಷ್ಠ ಪರಿಹಾರ ಮಂಜೂರು ಮಾಡುವಂತೆ, ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಹಾನಿ ಸಂಭವಿಸಿರುವ ಮನೆಗಳಿಗೆ ಗರಿಷ್ಠ ಪರಿಹಾರ ನೀಡುವಂತೆ ಸಂಭಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ತಹಶೀಲ್ದಾರ್ ಪ್ರತಿಭಾ ಆರ್, ಕಂದಾಯ ನಿರೀಕ್ಷಕ ಶಬೀರ್, ಗ್ರಾಮ ಆಡಳಿತಾಧಿಕಾರಿ ಪ್ರದೀಪ್, ಕುತ್ಯಾರು ಗ್ರಾ.ಪಂ. ಅಧ್ಯಕ್ಷ ಜನಾರ್ದನ ಆಚಾರ್ಯ, ಉಪಾಧ್ಯಕ್ಷೆ ಭಾರತಿ ರಾಘವೇಂದ್ರ, ಸದಸ್ಯರಾದ ಲತಾ ಆಚಾರ್ಯ, ಅಗ್ನೇಸ್ ಮಥಾಯಸ್, ಸ್ಥಳೀಯರಾದ ನವೀನ್ ಶೆಟ್ಟಿ, ಪ್ರಸಾದ್ ಶೆಟ್ಟಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.