ಉಡುಪಿ: ರಾಜಭವನದಲ್ಲಿ ಬುಧವಾರ ರಾಜ್ಯಪಾಲ ವಜುಬಾಯಿ ವಾಲಾ ಅವರನ್ನು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ ಮಾಡಿದರು.
ಅಯೋಧ್ಯೆಯ ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಸಮಸ್ತರ ಬೆಂಬಲ ಸಹಕಾರ ಅಪೇಕ್ಷಿಸಿ ದಕ್ಷಿಣ ರಾಜ್ಯಗಳ ಸಂಚಾರದಲ್ಲಿ ನಿರತರಾಗಿರುವ ಸ್ವಾಮೀಜಿ, ರಾಜ್ಯಪಾಲರನ್ನು ಭೇಟಿಮಾಡಿ ಮನವಿ ಪತ್ರ ಅರ್ಪಿಸಿದರು. ಕೆಲಹೊತ್ತು ಸಮಾಲೋಚನೆ ನಡೆಸಿದರು.
ಅಯೋಧ್ಯೆ ಆಂದೋಲನದ ವಿವಿಧ ಹಂತಗಳಲ್ಲಿ ಪಾಲ್ಗೊಂಡಿದ್ದನ್ನು ಸ್ಮರಿಸಿದ ರಾಜ್ಯಪಾಲರು ರಾಮಮಂದಿರ ನಿರ್ಮಾಣ ಕಾರ್ಯವನ್ನು ಬೆಂಬಲಿಸುವುದಾಗಿ ಶ್ರೀಗಳಿಗೆ ತಿಳಿಸಿದರು.
ವಿಶ್ವ ಹಿಂದೂ ಪರಿಷತ್ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ, ಶ್ರೀಗಳ ಆಪ್ತ ಕಾರ್ಯದರ್ಶಿ ವಿಷ್ಣು ಆಚಾರ್ಯ, ಕೃಷ್ಣಮೂರ್ತಿ ಭಟ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.