ADVERTISEMENT

ಪೇಜಾವರ ಸ್ವಾಮೀಜಿ ಮುರಳಿ ಮನೋಹರ ಜೋಶಿ ಭೇಟಿ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2022, 16:30 IST
Last Updated 10 ಅಕ್ಟೋಬರ್ 2022, 16:30 IST
ದೆಹಲಿ ಪ್ರವಾಸದಲ್ಲಿರುವ ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸೋಮವಾರ ಕೇಂದ್ರದ ಮಾಜಿ ಸಚಿವ ಹಾಗೂ ರಾಮಜನ್ಮಭೂಮಿ ಆಂದೋಲನದ ಪ್ರಮುಖರಾಗಿದ್ದ ಡಾ. ಮುರಳಿ ಮನೋಹರ ಜೋಶಿ ಅವರನ್ನು ಭೇಟಿಯಾಗಿ ಉಭಯ ಕುಶಲೋಪರಿ ನಡೆಸಿದರು.
ದೆಹಲಿ ಪ್ರವಾಸದಲ್ಲಿರುವ ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸೋಮವಾರ ಕೇಂದ್ರದ ಮಾಜಿ ಸಚಿವ ಹಾಗೂ ರಾಮಜನ್ಮಭೂಮಿ ಆಂದೋಲನದ ಪ್ರಮುಖರಾಗಿದ್ದ ಡಾ. ಮುರಳಿ ಮನೋಹರ ಜೋಶಿ ಅವರನ್ನು ಭೇಟಿಯಾಗಿ ಉಭಯ ಕುಶಲೋಪರಿ ನಡೆಸಿದರು.   

ಉಡುಪಿ: ದೆಹಲಿ ಪ್ರವಾಸದಲ್ಲಿರುವ ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸೋಮವಾರ ಕೇಂದ್ರದ ಮಾಜಿ ಸಚಿವ ಹಾಗೂ ರಾಮಜನ್ಮಭೂಮಿ ಆಂದೋಲನದ ಪ್ರಮುಖರಾಗಿದ್ದ ಡಾ. ಮುರಳಿ ಮನೋಹರ ಜೋಶಿ ಅವರನ್ನು ಭೇಟಿಯಾಗಿ ಉಭಯ ಕುಶಲೋಪರಿ ನಡೆಸಿದರು.

ಅಯೋಧ್ಯಾ ಆಂದೋಲನದಲ್ಲಿ ಜೋಶಿ ಅವರ ಭೂಮಿಕೆಯನ್ನು ಶ್ರೀಗಳು ಪ್ರಶಂಸಿಸಿದರು. ಹಿರಿಯ ಯತಿ ವಿಶ್ವೇಶ ತೀರ್ಥ ಶ್ರೀಗಳ ಜತೆಗಿನ ಒಡನಾಟವನ್ನು ಜೋಶಿ ಸ್ಮರಿಸಿಕೊಂಡರು.

ಉಡುಪಿ ಶ್ರೀಕೃಷ್ಣನ ಪಂಚಲೋಹದ ವಿಗ್ರಹ, ಶಾಲು ಸಹಿತ ಫಲ ಮಂತ್ರಾಕ್ಷತೆಯನ್ನು ಜೋಶಿ ಅವರಿಗೆ ನೀಡಿ ಗೌರವಿಸಲಾಯಿತು. ವಿಶ್ವೇಶತೀರ್ಥ ಶ್ರೀಗಳ ಕುರಿತಾಗಿ ಹಿರಿಯ ಫೋಟೊ ಜರ್ನಲಿಸ್ಟ್‌ ಆಸ್ಟ್ರೋ ಮೋಹನ್ ಅವರ ಫೋಟೋ ಆಲ್ಬಂ ಅನ್ನು ಶ್ರೀಗಳು ನೀಡಿದರು.

ADVERTISEMENT

ದೆಹಲಿ ಪೇಜಾವರ ಮಠದ ವ್ಯವಸ್ಥಾಪಕ ವಿದ್ವಾನ್ ದೇವಿಪ್ರಸಾದ ಭಟ್, ಶ್ರೀಗಳ ಆಪ್ತರಾದ ವಿಷ್ಣುಮೂರ್ತಿ ಆಚಾರ್ಯ, ಕೃಷ್ಣ ಭಟ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.