ಉಡುಪಿ: ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಿಗಿಸಿಕೊಂಡಿರುವ ಸಂಘಟನೆಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿರುವುದು ಸ್ವಾಗತಾರ್ಹ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ.
ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ‘ಸಮಾಜದಲ್ಲಿ ವಿದ್ವಂಸಕ ಕೃತ್ಯ ನಡೆಸುವ ದುಷ್ಟ ಶಕ್ತಿಗಳು ಮರು ಹುಟ್ಟು ಪಡೆಯದಂತೆ ಸರ್ಕಾರ ಜಾಗ್ರತೆ ವಹಿಸಬೇಕು. ಸಾಮಾಜಿಕ ಸಂಘಟನೆಗಳು, ರಾಜಕೀಯ ಪಕ್ಷಗಳು ದೇಶವಿರೋಧಿ ಸಂಘಟನೆಗಳ ಪರವಾಗಿ ನಿಲ್ಲಬಾರದು. ಸಮಾಜದಲ್ಲಿ ಶಾಂತಿ ನೆಮ್ಮದಿ ನೆಲೆಸಬೇಕು’ ಎಂದು ಸ್ವಾಮೀಜಿ ಅಭಿಪ್ರಾಯಪಟ್ಟರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.