ADVERTISEMENT

ನಾಯಕತ್ವ ಬದಲಾವಣೆಗೆ ಕಾಲ ಸೂಕ್ತವಾಗಿಲ್ಲ: ಪೇಜಾವರ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 20 ಜುಲೈ 2021, 14:43 IST
Last Updated 20 ಜುಲೈ 2021, 14:43 IST
ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಮಠ
ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಮಠ   

ಉಡುಪಿ: ರಾಜ್ಯದಲ್ಲಿ ನಾಯಕತ್ವ ಬದಲಾವವಣೆಗೆ ಕಾಲ ಸೂಕ್ತವಾಗಿಲ್ಲ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.

ಚೆನ್ನೈನಲ್ಲಿ ಮಾತನಾಡಿದ ಶ್ರೀಗಳು ‘ಯಡಿಯೂರಪ್ಪನವರು ಚೆನ್ನಾಗಿ ನಾಯಕತ್ವ ನಿಬಾಯಿಸಿದ್ದಾರೆ. ಕೋವಿಡ್ ಸಂದರ್ಭವನ್ನು ಸಮರ್ಥವಾಗಿ ಎದುರಿಸಿದ್ದಾರೆ.ನಾಯಕತ್ವ ಬದಲಾವಣೆಗೆ ಸೂಕ್ತವಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ನಾಯಕತ್ವ ಬದಲಾವಣೆ ಸಂಬಂಧ ಬಿಜೆಪಿಯಲ್ಲಿ ಯಾವ ಚರ್ಚೆಗಳು ನಡೆದಿವೆ ಎಂಬ ಮಾಹಿತಿ ಇಲ್ಲ. ಯಡಿಯೂರಪ್ಪ ಅವರು ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿದ ರೀತಿ ಹಾಗೂ ಅವರ ನಡೆಯನ್ನು ಗಮನಿಸಿ ವೈಯಕ್ತಿಕ ಅಭಿಪ್ರಾಯ ಹೇಳಿದ್ದೇನೆ ಎಂದು ಶ್ರೀಗಳು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.