ಉಡುಪಿ: ಕಾರ್ಕಳ ತಾಲ್ಲೂಕಿನ ಕಾಂತಾವರ ಸಮೀಪದ ಪಾಂಚನ ತೋಡಿನ ಕಾಲುಸಂಕಕ್ಕೆ ಬಿದ್ದು ನೀಲಯ್ಯ (65) ಎಂಬುವರು ಮೃತಪಟ್ಟಿದ್ದಾರೆ.
ಮಂಚದ ಬೈಲು ಬೇಲಾಡಿಯ ನೀಲಪ್ಪ ಬುಧವಾರ ಪೇಟೆಗೆ ಹೋಗಿ ಮರಳಿ ಮನೆಗೆ ಬರುವಾಗ ಈ ದುರ್ಘಟನೆ ಸಂಭವಿಸಿದೆ.
ವಿಪರೀತ ಮಳೆ ಸುರಿಯುತ್ತಿದ್ದರಿಂದ ಕಾಲುಸಂಕದ ಕೆಳಗೆ ರಭಸವಾಗಿ ನೀರು ಹರಿಯುತ್ತಿತ್ತು. ಈ ವೇಳೆ ಕಾಲುಸಂಕ ದಾಟುವಾಗ ಕಾಲುಜಾರಿ ತೋಡಿಗೆ ಬಿದ್ದು ಮೃತಪಟ್ಟಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.