ADVERTISEMENT

‘ಶಿಕ್ಷಣದ ಜತೆಗೆ ಕ್ರೀಡಾಸ್ಫೂರ್ತಿಯೂ ಇರಲಿ’

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2022, 14:24 IST
Last Updated 1 ಅಕ್ಟೋಬರ್ 2022, 14:24 IST
ಉಡುಪಿ ಪಿಪಿಸಿ ಕಾಲೇಜಿನಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಅಂತರ ಕಾಲೇಜು ಹ್ಯಾಂಡ್ ಬಾಲ್ ಪಂದ್ಯಾವಳಿ ದೃಶ್ಯ.
ಉಡುಪಿ ಪಿಪಿಸಿ ಕಾಲೇಜಿನಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಅಂತರ ಕಾಲೇಜು ಹ್ಯಾಂಡ್ ಬಾಲ್ ಪಂದ್ಯಾವಳಿ ದೃಶ್ಯ.   

ಉಡುಪಿ: ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಕ್ರೀಡಾ ಸ್ಫೂರ್ತಿ ಬೆಳೆಸಿಕೊಂಡರೆ ಜೀವನದಲ್ಲಿ ಯಶಸ್ಸು ಸಾಧ್ಯ ಎಂದು ಅದಮಾರು ಮಠದ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಆಡಳಿತಾಧಿಕಾರಿ ಡಾ.ಎ.ಪಿ.ಭಟ್‌ ಸಲಹೆ ನೀಡಿದರು.

ಶನಿವಾರ ನಗರದ ಪಿಪಿಸಿ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಅಂತರ ಕಾಲೇಜು ಹ್ಯಾಂಡ್ ಬಾಲ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಾರುತಿ, ಪಿಪಿಸಿ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿ ಗೌರವ ಕಾರ್ಯದರ್ಶಿ ಡಾ.ಶಶಿಕಿರಣ್ ಉಮಾಕಾಂತ್, ತಾಲ್ಲೂಕು ಕ್ರೀಡಾ ಸಂಯೋಜಕ ಸತೀಶ್ ಹೆಗ್ಡೆ, ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಜೀವನ್‌ ಶೆಟ್ಟಿ, ಪಿಪಿಸಿ ಕಾಲೇಜಿನ ಪ್ರಾಂಶುಪಾಲರಾದ ಪ್ರತಿಮಾ ಬಾಳಿಗಾ ಉಪಸ್ಥಿತರಿದ್ದರು.

ADVERTISEMENT

ದೈಹಿಕ ಶಿಕ್ಷಣ ಉಪನ್ಯಾಸಕ ಮಂಜುನಾಥ್ ಜೋಗಿ ವಂದಿಸಿದರು. ಉಪನ್ಯಾಸಕ ರಮಾನಂದ ರಾವ್ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.