ADVERTISEMENT

ರಾಜ್ಯದ ಮೀನುಗಾರರ ಮೇಲೆ ಹಲ್ಲೆ: ಕಠಿಣ ಕ್ರಮ ಜರುಗಿಸಿ: ಪ್ರಮೋದ್ ಮಧ್ವರಾಜ್

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2023, 4:07 IST
Last Updated 16 ಫೆಬ್ರುವರಿ 2023, 4:07 IST
ಪ್ರಮೋದ್ ಮಧ್ವರಾಜ್‌
ಪ್ರಮೋದ್ ಮಧ್ವರಾಜ್‌   

ಉಡುಪಿ: ಕರ್ನಾಟಕದ ಮೀನುಗಾರರ ಮೇಲೆ ಅನ್ಯರಾಜ್ಯದ ಮೀನುಗಾರರು ಮಾಡಿರುವ ಹಲ್ಲೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಒತ್ತಾಯಿಸಿದ್ದಾರೆ.

ಫೆ.8ರಂದು ಕನ್ಯಾಕುಮಾರಿ ನೇರವಾಗಿ 50 ನಾಟಿಕಲ್‌ ಮೈಲು ದೂರದಲ್ಲಿ ಆಳ ಸಮುದ್ರ ಮೀನುಗಾರಿಕೆ ಮಾಡುತ್ತಿದ್ದ ರಾಜ್ಯದ ಮೀನುಗಾರರ ಬೋಟ್‌ಗಳನ್ನು ಸುತ್ತುವರಿದ ಅನ್ಯ ರಾಜ್ಯಗಳ ಮೀನುಗಾರರು ಹಲ್ಲೆ ನಡೆಸಿದ್ದಾರೆ. ಬೋಟುಗಳಿಗೆ ಹಾನಿ ಮಾಡಿ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳನ್ನು ದೋಚಿದ್ದಾರೆ.

ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಮೀನುಗಾರರಿಗೆ ಆಗಿರುವ ನಷ್ಟವನ್ನು ಭರಿಸಬೇಕು, ಮುಂದೆ ಇಂತಹ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿಯಲ್ಲಿ ಮಧ್ವರಾಜ್ ಆಗ್ರಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.