ಉಡುಪಿ: ಶ್ರೀರಾಮಸೇನೆ ಪ್ರಾಂತ ಅಧ್ಯಕ್ಷರ ಮನೆಯಲ್ಲಿ ನಡೆದ ಆಯುಧ ಪೂಜೆಯಲ್ಲಿ ಪಾಲ್ಗೊಂಡ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪಿಸ್ತೂಲು, ಕತ್ತಿಗಳಿಗೆ ಪೂಜೆ ಸಲ್ಲಿಸಿದ್ದಾರೆ.
ಹಿಂದುತ್ವ ಹಾಗೂ ದೇಶದ ಉಳಿವಿಗಾಗಿ ದುರ್ಗಾ ಪೂಜೆಯಲ್ಲಿ ಭಾಗವಹಿಸಿದ್ದು, ಎಲ್ಲರೂ ಆಯುಧ ಪೂಜೆ ಮಾಡಬೇಕು. ದೇಶದ ಉಳಿವಿಗೆ ಕ್ಷಾತ್ರ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಮುತಾಲಿಕ್ ಕರೆ ನೀಡಿದರು.
ಶ್ರೀರಾಮ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಜಯರಾಮ ಅಂಬೆಕಲ್ಲು ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.