ADVERTISEMENT

ರಾಜ್ಯದೆಲ್ಲೆಡೆ ಡ್ರಗ್ಸ್‌ ಜಾಲದ ವಿರುದ್ಧ ಕಾರ್ಯಾಚರಣೆ: ಪ್ರವೀಣ್ ಸೂದ್‌

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2020, 12:45 IST
Last Updated 8 ಸೆಪ್ಟೆಂಬರ್ 2020, 12:45 IST
ಪ್ರವೀಣ್ ಸೂದ್, ರಾಜ್ಯ ಪೊಲೀಸ್ ಮಹಾನಿರ್ದೇಶಕ
ಪ್ರವೀಣ್ ಸೂದ್, ರಾಜ್ಯ ಪೊಲೀಸ್ ಮಹಾನಿರ್ದೇಶಕ   

ಉಡುಪಿ: ಡ್ರಗ್ಸ್‌ ಜಾಲ ಮಟ್ಟಹಾಕುವ ಕಾರ್ಯಬೆಂಗಳೂರಿಗೆ ಸೀಮಿತವಾಗದೆ ಎಲ್ಲ ಜಿಲ್ಲೆಗಳಲ್ಲೂ ನಡೆಯಬೇಕು. ಗಾಂಜಾ, ಸಿಂಥೆಟಿಕ್‌ ಹಾಗೂ ಡಿಸೈನರ್‌ ಡ್ರಗ್ಸ್‌ ಬಳಕೆಯನ್ನು ಪತ್ತೆಹಚ್ಚಬೇಕು ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದರು.

ಮಂಗಳವಾರ ಎಸ್‌ಪಿ ಕಚೇರಿಯಲ್ಲಿ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ರಾಜ್ಯಕ್ಕೆ ಯಾವುದೇ ಮಾರ್ಗದಿಂದ ಮಾದಕ ವಸ್ತುಗಳು ಪೂರೈಕೆಯಾಗುತ್ತಿದ್ದರೂ ಅದನ್ನು ಪತ್ತೆ ಹಚ್ಚಲಾಗುವುದು. ಜಾಲದಲ್ಲಿ ಎಷ್ಟೆ ಪ್ರಭಾವಿ ವ್ಯಕ್ತಿಗಳು ಭಾಗಿಯಾಗಿದ್ದರೂ ಕ್ರಮ ಜರುಗಿಸುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದು, ಅದರಂತೆ ಕಾರ್ಯಾಚರಣೆ ನಡೆಯುತ್ತಿದೆ ಎಂದರು.

ಬೆಳಗಾವಿ, ಹುಬ್ಬಳ್ಳಿ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮಾದಕ ವಸ್ತುಗಳ ಕಳ್ಳಸಾಗಣೆ ಜಾಲ ಪತ್ತೆ ಹಚ್ಚಲಾಗಿದೆ. ರಾಜ್ಯವನ್ನು ಡ್ರಗ್ಸ್‌ ಮುಕ್ತಗೊಳಿಸುವುದಕ್ಕೆ ಇಲಾಖೆ ಆದ್ಯತೆ ನೀಡಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.