ADVERTISEMENT

ಪದವಿಪೂರ್ವ ಬಾಲಕ ಬಾಲಕಿಯರ ಕಬಡ್ಡಿ ಟೂರ್ನಿ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2022, 5:25 IST
Last Updated 22 ಸೆಪ್ಟೆಂಬರ್ 2022, 5:25 IST
ಕುಂದಾಪುರ ಸಮೀಪದ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ಬಾಲಕ ಹಾಗೂ ಬಾಲಕಿಯರ ಕಬಡ್ಡಿ ಪಂದ್ಯಾಟದ ಉದ್ಘಾಟನೆ ನಡೆಯಿತು.
ಕುಂದಾಪುರ ಸಮೀಪದ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ಬಾಲಕ ಹಾಗೂ ಬಾಲಕಿಯರ ಕಬಡ್ಡಿ ಪಂದ್ಯಾಟದ ಉದ್ಘಾಟನೆ ನಡೆಯಿತು.   

ಕುಂದಾಪುರ: ಹೆಮ್ಮಾಡಿಯ ವಿ.ವಿ.ವಿ ಮಂಡಳಿ ಹಾಗೂ ಸಮರ್ಪಣಾ ಎಜುಕೇಷನ್ ಟ್ರಸ್ಟ್ ಆಡಳಿತದ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜು ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜು ಬಾಲಕ ಬಾಲಕಿಯರ ಕಬಡ್ಡಿ ಟೂರ್ನಿ ಬುಧವಾರ ನಡೆಯಿತು.

ವಿ.ವಿ.ವಿ ಮಂಡಳಿ ಅಧ್ಯಕ್ಷ ಕೆ.ಗೋಪಾಲ ಪೂಜಾರಿ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ
ವಹಿಸಿದ್ದರು. ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಾರುತಿ ಉದ್ಘಾಟಿಸಿದರು.

ಕೊಲ್ಲೂರು ಮೂಕಾಂಬಿಕಾ ದೇವ ಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿ, ಜನತಾ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಮಂಜು ಕಾಳಾವರ್, ಜಿಲ್ಲಾ ಪದವಿ ಪೂರ್ವ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಜೀವನ್ ಕುಮಾರ್ ಶೆಟ್ಟಿ, ಜಿಲ್ಲಾ ಕ್ರೀಡಾ ಸಂಯೋಜಕ ದಿನೇಶ್ ಕುಮಾರ್, ತಾಲ್ಲೂಕು ಕ್ರೀಡಾ ಸಂಯೋಜಕ ರಾಮ ಶೆಟ್ಟಿ, ಆಡಳಿತ ಮಂಡಳಿಯ ಉಪಾಧ್ಯಕ್ಷ ಮಂಜುನಾಥ ಗಾಣಿಗ, ಕಾರ್ಯದರ್ಶಿ ಸುನಿಲ್ ಚಿತ್ತಾಲ್, ಕೋಶಾಧಿಕಾರಿ ಕಾರ್ತಿಕೇಯ ಎಂ.ಎಸ್, ಉಪ ಪ್ರಾಂಶುಪಾಲ ರಮೇಶ್ ಪೂಜಾರಿ, ದೈಹಿಕ ಶಿಕ್ಷಣ ನಿರ್ದೇಶಕ ಪ್ರದೀಪ್ ಕುಮಾರ್ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕ ವಸಂತ್ ಕುಮಾರ್ ಶೆಟ್ಟಿ ಹಾಗೂ ನಾಗರಾಜ್ ಶೆಟ್ಡಿ ಇದ್ದರು.

ADVERTISEMENT

ಗಣೇಶ್ ಮೊಗವೀರ ಸ್ವಾಗತಿಸಿದರು. ಪ್ರಿಯಾಂಕ ವಂದಿಸಿದರು. ಉದಯ್ ನಾಯ್ಕ್ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.