ಉಡುಪಿ: ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಮಠಕ್ಕೆ ಮರಳಿದ್ದಾರೆ.
14 ದಿನ ಹೋಂ ಕ್ವಾರಂಟೈನ್ನಲ್ಲಿರಲು ವೈದ್ಯರು ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಶ್ರೀಗಳು ಉಡುಪಿಯ ದೊಡ್ಡಣಗುಡ್ಡೆಯ ಪಾಡಿಗಾರದ ಪುತ್ತಿಗೆ ಮಠದಲ್ಲಿ ಏಕಾಂತವಾಗಿದ್ದು, ದೇವರ ಪೂಜೆ, ಪ್ರಾರ್ಥನೆಯಲ್ಲಿ ತೊಡಗಿದ್ದಾರೆ ಎಂದು ಮಠದ ಆಪ್ತರು ತಿಳಿಸಿದ್ದಾರೆ.
ಈಚೆಗೆ ಬೆಂಗಳೂರಿನಿಂದ ಹಿಂದಿರುಗಿದ ಬಳಿಕ ಶ್ರೀಗಳಿಗೆ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿತ್ತು. ಜುಲೈ 21ರಂದು ಸೋಂಕು ದೃಢಪಟ್ಟಿತ್ತು. ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಶ್ರೀಗಳು ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಶ್ರೀಗಳು ಗುಣಮುಖರಾಗಿದ್ದು, ಭಕ್ತರಲ್ಲಿ ಸಂತಸ ಮೂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.