ADVERTISEMENT

ಉಡುಪಿ: ಮುಂದುವರಿದ ಗಾಳಿ ಮಳೆ

​ಪ್ರಜಾವಾಣಿ ವಾರ್ತೆ
Published 20 ಜೂನ್ 2021, 1:05 IST
Last Updated 20 ಜೂನ್ 2021, 1:05 IST

ಉಡುಪಿ: ಜಿಲ್ಲೆಯಲ್ಲಿ ಶನಿವಾರವೂ ಬಿರುಗಾಳಿ ಸಹಿತ ಮಳೆ ಸುರಿಯಿತು. ಬ್ರಹ್ಮಾವರ ತಾಲ್ಲೂಕಿನ ಕರ್ಕಡ, ಹಾವಂಜೆ, ಇನ್ನಾ, ಬೈಂದೂರು ತಾಲ್ಲೂಕಿನ ನಾವುಂದ, ಕಾಲ್ತೋಡು, ಬಿಜೂರು, ಉಡುಪಿ ತಾಲ್ಲೂಕಿನ ತೆಂಕನಿಡಿಯೂರು ಗ್ರಾಮಗಳಲ್ಲಿ ಮನೆಗಳಿಗೆ ಹಾನಿಯಾಗಿದೆ.‌

ನಿರಂತರ ಸುರಿಯುತ್ತಿರುವ ಮಳೆಗೆ ಉಡುಪಿಯ ಮಠದಬೆಟ್ಟು ಕಾಲು ಸೇತುವೆ ಕುಸಿದೆ. ಪರ್ಕಳದಲ್ಲಿ ಬಿರುಗಾಳಿಗೆ ಹಲವು ಮನೆಗಳ ಹೆಂಚು, ತಗಡಿನ ಶೀಟ್‌ಗಳು ಹಾರಿಹೋಗಿವೆ. ಜಿಲ್ಲೆಯಲ್ಲಿ 3 ಸೆಂ.ಮೀ ಮಳೆ ಬಿದ್ದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT